ರಾಷ್ಟ್ರಪತಿ ಹುದ್ದೆಗೆ ಪವಾರ್ ಹೆಸರು ಸೂಚಿಸಿದ ಶಿವಸೇನೆ

Published : Apr 25, 2017, 11:11 AM ISTUpdated : Apr 11, 2018, 12:35 PM IST
ರಾಷ್ಟ್ರಪತಿ ಹುದ್ದೆಗೆ ಪವಾರ್ ಹೆಸರು ಸೂಚಿಸಿದ ಶಿವಸೇನೆ

ಸಾರಾಂಶ

ಇದೇವೇಳೆ ವಿಪಕ್ಷಗಳಾದ ಎಡರಂಗ, ಕಾಂಗ್ರೆಸ್ ಮತ್ತು ನಿತೀಶ್ ಕುಮಾರ್ ಅವರ ಜೆಡಿಯುದ ಒಮ್ಮತದ ಅಭ್ಯರ್ಥಿಯಾಗಿ ಶರತ್ ಪವಾರ್ ಆಯ್ಕೆಯಾಗುವ ಸಾಧ್ಯತೆಯಿದೆ ಎನ್ನಲಾಗುತ್ತಿದೆ.

ನವದೆಹಲಿ(ಏ.25): ರಾಷ್ಟ್ರಪತಿ ಚುನಾವಣೆಗೆ ಬಿಜೆಪಿ ಇನ್ನೂ ಅಭ್ಯರ್ಥಿಯ ಹುಡುಕಾಟದಲ್ಲಿರುವಾಗಲೇ, ಎನ್'ಡಿಎ ಮೈತ್ರಿ ಪಕ್ಷ ಶಿವಸೇನೆ ಎನ್'ಸಿಪಿ ಮುಖ್ಯಸ್ಥ ಶರದ್ ಪವಾರ್ ಹೆಸರನ್ನು ಶಿಫಾರಸು ಮಾಡಿದೆ.

ಇದರ ಜತೆಗೆ ಬಿಜೆಪಿ ಕೂಡಾ ಶರದ್ ಪವಾರ್ ಅವರನ್ನು ಬೆಂಬಲಿಸಬೇಕು ಎಂದು ಮನವಿ ಮಾಡಿದೆ.

ಶಿವಸೇನೆಯು ರಾಷ್ಟ್ರಪತಿ ಆಯ್ಕೆಗೆ ಮೊದಲು ಶಿಫಾರಸು ಮಾಡಿದ್ದು ಆರೆಸ್ಸೆಸ್ ಮುಖ್ಯಸ್ಥ ಮೋಹನ್ ಭಾಗವತ್ ಹೆಸರನ್ನು. ಆದರೆ ಮೋಹನ್ ಭಾಗವತ್ ಅವರು ನಾನು ರಾಷ್ಟ್ರಪತಿ ಹುದ್ದೆಯ ರೇಸ್'ನಲ್ಲಿಲ್ಲ ಎಂದು ಸ್ಪಷ್ಟಪಡಿಸಿದ ಬಳಿಕ ಶರದ್ ಪವಾರ್ ಹೆಸರು ಶಿಫಾರಸು ಮಾಡಿದೆ.

ಇದೇವೇಳೆ ವಿಪಕ್ಷಗಳಾದ ಎಡರಂಗ, ಕಾಂಗ್ರೆಸ್ ಮತ್ತು ನಿತೀಶ್ ಕುಮಾರ್ ಅವರ ಜೆಡಿಯುದ ಒಮ್ಮತದ ಅಭ್ಯರ್ಥಿಯಾಗಿ ಶರತ್ ಪವಾರ್ ಆಯ್ಕೆಯಾಗುವ ಸಾಧ್ಯತೆಯಿದೆ ಎನ್ನಲಾಗುತ್ತಿದೆ.

ಒಂದುವೇಳೆ ಶರದ್ ಪವಾರ್ ಒಮ್ಮತದ ಅಭ್ಯರ್ಥಿಯಾಗಿ ಹೊರಹೊಮ್ಮಿದರೆ, ಉದ್ಧವ್ ಠಾಕ್ರೆ ಅವರು ಮಾತುಕತೆಗೆ ಮುಂದಾಗಬಹುದು ಎಂದು ಶಿವಸೇನಾ ವಕ್ತಾರ ರಾವುತ್ ತಿಳಿಸಿದ್ದಾರೆ.  

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಕೋಲಾರ: ರೈಲಿಗೆ ಸಿಲುಕಿ ಯುವಕನ ಎಡಗೈ ಕಟ್; ಅದೃಷ್ಟವಶಾತ್ ಪ್ರಾಣಪಾಯದಿಂದ ಪಾರು!
ಒಡಿಶಾ ಶಾಸಕರ ವೇತನ ಮೂರು ಪಟ್ಟು ಹೆಚ್ಚಳ, ನಿರ್ಧಾರ ಮರುಪರಿಶೀಲಿಸುವಂತೆ ಬಿಜೆಪಿ ಶಾಸಕರಿಂದಲೇ ಆಗ್ರಹ!