ಕರಾವಳಿಗೆ ಮೊದಲ ಸಲ ಕೈತಪ್ಪಿತು ಸಚಿವ ಸ್ಥಾನ: 16 ಬಿಜೆಪಿ ಶಾಸಕರಿದ್ದರೂ ಒಬ್ಬರೂ ಮಂತ್ರಿ ಇಲ್ಲ

Published : Aug 21, 2019, 09:44 AM ISTUpdated : Aug 21, 2019, 10:12 AM IST
ಕರಾವಳಿಗೆ ಮೊದಲ ಸಲ ಕೈತಪ್ಪಿತು ಸಚಿವ ಸ್ಥಾನ: 16 ಬಿಜೆಪಿ ಶಾಸಕರಿದ್ದರೂ ಒಬ್ಬರೂ ಮಂತ್ರಿ ಇಲ್ಲ

ಸಾರಾಂಶ

ಕರಾವಳಿಗೆ ಮೊದಲ ಸಲ ಕೈತಪ್ಪಿತು ಸಚಿವ ಸ್ಥಾನ| ದ.ಕ, ಉಡುಪಿ, ಉತ್ತರ ಕನ್ನಡಕ್ಕಿಲ್ಲ ಮಣೆ| 16 ಬಿಜೆಪಿ ಶಾಸಕರು ಇದ್ದರೂ ಒಬ್ಬರೂ ಮಂತ್ರಿಇಲ್ಲ

ಆತ್ಮಭೂಷಣ್

ಮಂಗಳೂರು[ಆ.21]: ಕಳೆದ ಮೂರು ದಶಕಗಳಿಂದಲೂ ಬಿಜೆಪಿ ಹಾಗೂ ಸಂಘ ಪರಿವಾರದ ಗಟ್ಟಿ ನೆಲವಾಗಿರುವ ಕರಾವಳಿ ಜಿಲ್ಲೆಗಳ ಯಾವೊಬ್ಬ ಶಾಸಕನಿಗೂ ಮುಖ್ಯಮಂತ್ರಿ ಬಿ. ಎಸ್.ಯಡಿಯೂರಪ್ಪ ಅವರ ಸಂಪುಟದಲ್ಲಿ ಸಚಿವ ಸ್ಥಾನ ಸಿಕ್ಕಿಲ್ಲ. ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳಲ್ಲಿ ಒಟ್ಟು 19 ಕ್ಷೇತ್ರ ಪೈಕಿ 16ರಲ್ಲಿ ಬಿಜೆಪಿ ಶಾಸಕರು ಇದ್ದಾರೆ. ಇವರಲ್ಲಿ ಯಾರಿಗೂ ಸಚಿವ ಸ್ಥಾನ ಸಿಕ್ಕಿಲ್ಲ. ಹೀಗಾಗಿದ್ದು ಇತಿಹಾಸದಲ್ಲಿ ಇದೇ ಮೊದಲು.

ಉತ್ತರ ಕನ್ನಡದ ಶಾಸಕ ಕಾಗೇರಿ ವಿಶ್ವೇಶ್ವರ ಹೆಗಡೆ ಸ್ಪೀಕರ್ ಆಗಿದ್ದಾರೆ. ಸಚಿವ ಸ್ಥಾನ ಲಭಿಸಿರುವ ಉಡುಪಿ ಜಿಲ್ಲೆಯ ಕೋಟ ಶ್ರೀನಿವಾಸ ಪೂಜಾರಿ ವಿಧಾನ ಪರಿಷತ್ ಸದಸ್ಯರು. ಹಾಗಾಗಿ ದಕ್ಕಿದ ಈ ಎರಡು ಸ್ಥಾನಗಳಿಗೇ ಕರಾವಳಿ ಜನತೆ ತೃಪ್ತಿಪಟ್ಟುಕೊಳ್ಳಬೇಕಾಗಿದೆ.

ಬಿಎಸ್‌ವೈ ಸಚಿವ ಸಂಪುಟ ವಿಸ್ತರಣೆ: ಎಲ್ಲಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ಕಿಸಿ

ಇತ್ತೀಚೆಗೆ ಒಂದೆರಡು ಅಸೆಂಬ್ಲಿ ಚುನಾವಣೆ ಹೊರತುಪಡಿಸಿದರೆ, ಬಳಿಕ ಬಿಜೆಪಿ ಪಾರಮ್ಯದ ಕ್ಷೇತ್ರಗಳೇ ಅಧಿಕ. ಅಂತಹ ಕರಾವಳಿ ಜಿಲ್ಲೆಯ ಶಾಸಕರು ಈಗ ಸಚಿವ ಸ್ಥಾನದಿಂದ ವಂಚಿತಗೊಳ್ಳುವಂತಾಗಿದೆ. 2018ರ ಅಸೆಂಬ್ಲಿ ಚುನಾವಣೆ ಯಲ್ಲಿ ದ.ಕ. ಜಿಲ್ಲೆಯ ಎಂಟು ಕ್ಷೇತ್ರಗಳ ಪೈಕಿ ಏಳರಲ್ಲಿ ಬಿಜೆಪಿ ಶಾಸಕರು ಗೆದ್ದಿದ್ದರು. ಉಡುಪಿಯ 5 ಕ್ಷೇತ್ರಗಳಲ್ಲೂ ಬಿಜೆಪಿಯೇ ಅಧಿಪತ್ಯ ಹೊಂದಿದೆ. ಇನ್ನು ಉತ್ತರ ಕನ್ನಡದಲ್ಲಿ ಆರು ಕ್ಷೇತ್ರಗಳಲ್ಲಿ ನಾಲ್ಕರಲ್ಲಿ ಬಿಜೆಪಿ ಗೆದ್ದಿತ್ತು.

ಸಚಿವ ಸ್ಥಾನ ವಂಚಿತ ಅಂಗಾರ: ದ.ಕ.ಜಿಲ್ಲೆಯ ಮೀಸಲು ಕ್ಷೇತ್ರ ಸುಳ್ಯದಲ್ಲಿ ಆರು ಬಾರಿ ಶಾಸಕರಾದ ಅಂಗಾರ ಅವರಿಗೆ ಈ ಬಾರಿ ಸಚಿವ ಸ್ಥಾನ ಖಚಿತ ಎನ್ನುವ ಮಾತು ಕೇಳಿಬರುತ್ತಿತ್ತು. ಆದರೆ ಅವಕಾಶ ವಂಚಿತರಾಗಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಬೆಂಗಳೂರಿನ 2ನೇ ಏರ್‌ಪೋರ್ಟ್‌, ಗುರುತಿಸಿರೋ ಈ 3 ಸ್ಥಳಗಳಲ್ಲಿ ಯಾವುದು ಬೆಸ್ಟ್? ಅಧ್ಯಯನಕ್ಕೆ ಟೆಂಡರ್ ಕರೆದ ಸರ್ಕಾರ!
ನವೋದಯ ಪರೀಕ್ಷೆಯಲ್ಲಿ ಅಕ್ರಮ ಆರೋಪ; ಬೀದರ್‌ನಲ್ಲಿ ಬಿಇಓಗೆ ವಿದ್ಯಾರ್ಥಿ ಪೋಷಕರಿಂದ ತರಾಟೆ