
ನವದೆಹಲಿ[ಜೂ.16]: ಲೋಕಸಭೆ ಚುನಾವಣೆ ಹೀನಾಯ ಸೋಲಿನ ಹಿನ್ನೆಲೆಯಲ್ಲಿ ರಾಜೀನಾಮೆ ನಿರ್ಧಾರ ಕೈಗೊಂಡು ಪಕ್ಷದ ಚಟುವಟಿಕೆಗಳಿಂದಲೇ ದೂರ ಉಳಿದಿರುವ ಅಧ್ಯಕ್ಷ ರಾಹುಲ್ ಗಾಂಧಿ ಅನುಪಸ್ಥಿತಿಯಲ್ಲಿ ಕಾಂಗ್ರೆಸ್ ಪಕ್ಷ ಎರಡು ನೇಮಕಾತಿಗಳನ್ನು ಮಾಡಿದೆ.
ಮಹಾರಾಷ್ಟ್ರದ ವಿಧಾನಸಭೆ ಹಾಗೂ ವಿಧಾನಪರಿಷತ್ತಿನ ಕೆಲವೊಂದು ಹುದ್ದೆಗಳಿಗೆ ಶಾಸಕರು, ಮೇಲ್ಮನೆ ಸದಸ್ಯರನ್ನು ನೇಮಕಗೊಳಿಸಿದೆ. ಲೋಕಸಭೆ ಚುನಾವಣೆ ಬಳಿಕ ರಾಹುಲ್ ಅನುಪಸ್ಥಿತಿಯಲ್ಲಿ ಕೈಗೊಂಡ ಮೊದಲ ನಿರ್ಧಾರ ಇದಾಗಿದೆ.
ಮಹಾರಾಷ್ಟ್ರ ಉಸ್ತುವಾರಿ ಮಲ್ಲಿಕಾರ್ಜುನ ಖರ್ಗೆ ಅವರ ಪ್ರಸ್ತಾವದ ಅನುಸಾರ ಈ ನೇಮಕ ಮಾಡಲಾಗಿದೆ ಎಂದು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್ ಅವರು ತಿಳಿಸಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.