
ನವದೆಹಲಿ: ನರೇಂದ್ರ ಮೋದಿ ಸರ್ಕಾರದ ಆಕ್ರಮಣಕಾರಿ ವಿದೇಶಾಂಗ ನೀತಿ ರೂಪಿಸಿದ್ದ ವಿದೇಶಾಂಗ ಕಾರ್ಯದರ್ಶಿ ಎಸ್. ಜೈಶಂಕರ್ ಭಾನುವಾರ ನಿವೃತ್ತಿ ಹೊಂದಿದರು. 1977ನೇ ಬ್ಯಾಚಿನ ಐಎಫ್ಎಸ್ ಅಧಿಕಾರಿಯಾದ ಜೈಶಂಕರ್ ಸೋವಿಯತ್ ಒಕ್ಕೂಟದಲ್ಲಿ 1979 ರಿಂದ 1981 ರ ವರೆಗೆ ರಾಯಭಾರ ಕಚೇರಿ ಅಧಿಕಾರಿಯಾಗಿ ವೃತ್ತಿ ಆರಂಭಿಸಿದ್ದರು.
2014ರ ಸೆಪ್ಟೆಂಬರ್ ನಲ್ಲಿ ನ್ಯೂಯಾರ್ಕ್ನ ಮ್ಯಾಡಿಸನ್ ಸ್ಕ್ವೇರ್ನಲ್ಲಿ ಮೋದಿ ಭಾಷಣಕ್ಕೆ ವೇದಿಕೆ ಕಲ್ಪಿಸಿದ್ದರ ಹಿಂದೆ ಜೈಶಂಕರ್ ಪಾತ್ರ ಮಹತ್ವದಾಗಿತ್ತು. ಆ ಸಂದರ್ಭದಲ್ಲಿ ಅವರು ಅಮೆರಿಕಕ್ಕೆ ಭಾರತದ ರಾಯಭಾರಿಯಾಗಿದ್ದರು. ಬಳಿಕ 2015 ಜ.29ರಂದು ಭಾರತದ ವಿದೇಶಾಂಗ ಕಾರ್ಯದರ್ಶಿಯಾಗಿ ನೇಮಕ ಗೊಂಡಿದ್ದರು.
ಇತ್ತೀಚೆಗೆ ಭಾರತ, ಚೀನಾ ನಡುವೆ ಸೃಷ್ಟಿಯಾಗಿದ್ದ ಡೋಕ್ಲಾಂ ಬಿಕ್ಕಟ್ಟನ್ನು ಮಾತುಕತೆಯ ಮೂಲಕ ಯಶಸ್ವಿಯಾಗಿ ಬಗೆಹರಿಸಿದ್ದರು. ಭಾರತ ಮತ್ತು ಇಸ್ರೇಲ್ ಸಂಬಂಧ ಬಲ ವರ್ಧನೆಯಲ್ಲಿ ಜೈಶಂಕರ್ ರಾಜತಾಂತ್ರಿಕ ಶ್ರಮ ಅಡಗಿದೆ. ತೆರವಾದ ಸ್ಥಾನಕ್ಕೆ ವಿಜಯ್ ಕೇಶವ್ ಗೋಖಲೆ ಅಧಿಕಾರ ವಹಿಸಿಕೊಳ್ಳಲಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.