ಅರಣ್ಯ ಸಿಬ್ಬಂದಿ ಸಾವಿನ ಪರಿಹಾರ 30 ಲಕ್ಷಕ್ಕೇರಿಕೆ

Published : Sep 12, 2019, 09:23 AM IST
ಅರಣ್ಯ ಸಿಬ್ಬಂದಿ ಸಾವಿನ ಪರಿಹಾರ 30 ಲಕ್ಷಕ್ಕೇರಿಕೆ

ಸಾರಾಂಶ

ಹುತಾತ್ಮರಾದ ಅರಣ್ಯ ಇಲಾಖೆ ಸಿಬ್ಬಂದಿಗೆ ನೀಡುವ ಪರಿಹಾರದ ಮೊತ್ತವನ್ನು 20 ಲಕ್ಷ ರು.ಗಳಿಂದ 30 ಲಕ್ಷ ರು.ಗಳಿಗೆ ಹೆಚ್ಚಿಸುವುದಾಗಿ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಘೋಷಿಸಿದ್ದಾರೆ.

ಬೆಂಗಳೂರು [ಸೆ.12]:  ಕರ್ತವ್ಯ ನಿರ್ವಹಿಸುವಾಗ ಹುತಾತ್ಮರಾದ ಅರಣ್ಯ ಇಲಾಖೆ ಸಿಬ್ಬಂದಿಗೆ ನೀಡುವ ಪರಿಹಾರದ ಮೊತ್ತವನ್ನು 20 ಲಕ್ಷ ರು.ಗಳಿಂದ 30 ಲಕ್ಷ ರು.ಗಳಿಗೆ ಹೆಚ್ಚಿಸುವುದಾಗಿ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಘೋಷಿಸಿದರು.

 ನಗರದ ಮಲ್ಲೇಶ್ವರಂನಲ್ಲಿರುವ ಅರಣ್ಯ ಭವನದಲ್ಲಿ ಏರ್ಪಡಿಸಿದ್ದ ರಾಷ್ಟ್ರೀಯ ಅರಣ್ಯ ಹುತಾತ್ಮರ ದಿನಾಚರಣೆ ಕಾರ್ಯಕ್ರಮದಲ್ಲಿ ಹುತಾತ್ಮ ಅರಣ್ಯ ಸಿಬ್ಬಂದಿಯ ಸ್ಮಾರಕಕ್ಕೆ ಗೌರವ ಸಲ್ಲಿಸಿದ ನಂತರ ಅವರು ಮಾತನಾಡಿದರು.

 ಕರ್ತವ್ಯ ನಿರ್ವಹಿಸುವಾಗ ಮೃತ ಪಟ್ಟಪೊಲೀಸ್‌ ಸಿಬ್ಬಂದಿಗೆ ನೀಡುತ್ತಿದ್ದ ಪರಿಹಾರವನ್ನು 20 ಲಕ್ಷದಿಂದ 30 ಲಕ್ಷ ರು.ಗಳಿಗೆ ಹೆಚ್ಚಿಸಲಾಗಿದೆ. ಅದೇ ರೀತಿ ಅರಣ್ಯ ಸಿಬ್ಬಂದಿಗೂ ಇದೇ ಮೊತ್ತದ ಪರಿಹಾರ ನೀಡಲು ನಿರ್ಧರಿಸಲಾಗಿದೆ. ಜತೆಗೆ ಹುತಾತ್ಮರ ಕುಟುಂಬಗಳ ಕ್ಷೇಮಾಭಿವೃದ್ಧಿಗೂ ಸರ್ಕಾರ ಬದ್ಧವಾಗಿದೆ ಎಂದು ತಿಳಿಸಿದರು.

ಹೆಚ್ಚಿನ ಜಿಲ್ಲಾ ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ

ರಾಜ್ಯದಲ್ಲಿ ಶೇ.22ರಷ್ಟುಅರಣ್ಯ ಪ್ರದೇಶ ಇರುವುದು ನೆಮ್ಮದಿ ನೀಡುವ ವಿಚಾರ. ಅದಕ್ಕಾಗಿ ಹಗಲಿರುಳು ಶ್ರಮಿಸುವ ಅರಣ್ಯ ಸಿಬ್ಬಂದಿ ಕಾಯಕ ಶ್ಲಾಘನೀಯ. ಅರಣ್ಯ ಸಂಪತ್ತು ಮತ್ತು ವನ್ಯ ಜೀವಿಗಳ ಸಂರಕ್ಷಣೆಗಾಗಿ ತಮ್ಮ ಪ್ರಾಣವನ್ನೇ ಅರ್ಪಿಸಿದ ಹಲವು ಮಂದಿ ಅರಣ್ಯಾಧಿಕಾರಿಗಳಿಂದಾಗಿ ಕರ್ನಾಟಕ ಅರಣ್ಯ ಇಲಾಖೆಯಲ್ಲಿ ಇಂದಿಗೂ ಹಚ್ಚ ಹಸಿರಾಗಿವೆ. ಕುಖ್ಯಾತ ಕಾಡುಗಳ್ಳ ವೀರಪ್ಪನ್‌ ಮೋಸದ ಬಲೆಗೆ ಸಿಲುಕಿ ಐಎಫ್‌ಎಸ್‌ ಅಧಿಕಾರಿ ಪಿ.ಶ್ರೀನಿವಾಸ್‌ ಹುತಾತ್ಮರಾಗಿದ್ದರು. ಅವರ ಸೇವೆಯನ್ನು ಮೆಚ್ಚಿ ಭಾರತ ಸರ್ಕಾರ ಕೀರ್ತಿ ಚಕ್ರ ಶೌರ್ಯ ಪ್ರಶಸ್ತಿಯನ್ನು ಮರಣೋತ್ತರವಾಗಿ ನೀಡಿ ಗೌರವಿಸಿತ್ತು ಎಂದು ಮುಖ್ಯಮಂತ್ರಿಯವರು ಹೇಳಿದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಮೆಹಂದಿ ಗಿಡ ಪೂಜಿಸಿದರೆ ಇಷ್ಟೆಲ್ಲಾ ಲಾಭವಿದೆಯೇ?: ಪೂಜೆಗೆ ಇದೇ ಸರಿಯಾದ ದಿನ!
Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!