ಗಾಯಾಳು ಚಿರತೆಗೆ ಬೈಕಲ್ಲೇ ಆಸ್ಪತ್ರೆಗೆ ಡ್ರಾಪ್‌ ಕೊಟ್ಟ ಅರಣ್ಯ ಇಲಾಖೆ ಸಿಬ್ಬಂದಿ!

Published : Apr 11, 2018, 09:39 AM ISTUpdated : Apr 14, 2018, 01:13 PM IST
ಗಾಯಾಳು ಚಿರತೆಗೆ ಬೈಕಲ್ಲೇ ಆಸ್ಪತ್ರೆಗೆ ಡ್ರಾಪ್‌ ಕೊಟ್ಟ ಅರಣ್ಯ ಇಲಾಖೆ ಸಿಬ್ಬಂದಿ!

ಸಾರಾಂಶ

ಬೋನಿನಿಂದ ಹೊರಗಿರುವ ಚಿರತೆಯನ್ನು ದೂರದಲ್ಲಿ ನೋಡಿದರೇ ಮೈಯೆಲ್ಲಾ ಬೆವರುತ್ತದೆ. ಅಂಥದ್ದರಲ್ಲಿ ಅರಣ್ಯ ಇಲಾಖೆ ಸಿಬ್ಬಂದಿ ಗಾಯಾಳು ಚಿರತೆಯೊಂದನ್ನು ಬೈಕ್‌ನಲ್ಲಿ ಕೂರಿಸಿಕೊಂಡು ಪಶುಚಿಕಿತ್ಸಾಲಯಕ್ಕೆ ಕರೆದೊಯ್ದ ಅಚ್ಚರಿಯ ಘಟನೆ ಉತ್ತರಪ್ರದೇಶದಲ್ಲಿ ನಡೆದಿದೆ.

ಗೋರಖ್‌ಪುರ: ಬೋನಿನಿಂದ ಹೊರಗಿರುವ ಚಿರತೆಯನ್ನು ದೂರದಲ್ಲಿ ನೋಡಿದರೇ ಮೈಯೆಲ್ಲಾ ಬೆವರುತ್ತದೆ. ಅಂಥದ್ದರಲ್ಲಿ ಅರಣ್ಯ ಇಲಾಖೆ ಸಿಬ್ಬಂದಿ ಗಾಯಾಳು ಚಿರತೆಯೊಂದನ್ನು ಬೈಕ್‌ನಲ್ಲಿ ಕೂರಿಸಿಕೊಂಡು ಪಶುಚಿಕಿತ್ಸಾಲಯಕ್ಕೆ ಕರೆದೊಯ್ದ ಅಚ್ಚರಿಯ ಘಟನೆ ಉತ್ತರಪ್ರದೇಶದಲ್ಲಿ ನಡೆದಿದೆ.

ಕಳೆದ ಭಾನುವಾರ ಗೋರಖ್‌ಪುರ ಸಮೀಪದ ಪೋಥಾ ನುಲ್ಲಾ ಅರಣ್ಯದಲ್ಲಿ ಗಸ್ತು ತಿರುಗುತ್ತಿದ್ದ ವೇಳೆ ಚಿರತೆಯೊಂದು ಪ್ರಜ್ಞಾಹೀನ ಸ್ಥಿತಿಯಲ್ಲಿ ಬಿದ್ದಿದ್ದು ಅರಣ್ಯ ಇಲಾಖೆ ಸಿಬ್ಬಂದಿ ಗಮನಕ್ಕೆ ಬಂದಿತ್ತು. ಈ ವೇಳೆ ಕಚೇರಿಗೆ ಕರೆ ಮಾಡಿದ್ದ ಸಿಬ್ಬಂದಿ ಬೋನ್‌ ತರುವಂತೆ ಹೇಳಿದ್ದರು.

ಆದರೆ ಬೋನ್‌ ತರುವುದು ವಿಳಂಬವಾದ ಕಾರಣ, ಚಿರತೆಗೆ ಪ್ರಾಣಹಾನಿ ಭೀತಿ ಎದುರಾಗಿತ್ತು. ಹೀಗಾಗಿ ಅರಣ್ಯ ಸಿಬ್ಬಂದಿ ಚಿರತೆಯನ್ನು ಬೈಕ್‌ ಮೇಲೆ ಹಾಕಿಕೊಂಡು ಸಮೀಪದ ಪಶು ಚಿಕಿತ್ಸಾಲಯಕ್ಕೆ ಕರೆದೊಯ್ದು ಚಿಕಿತ್ಸೆ ಕೊಡಿಸಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

'ಒಂದು-ಎರಡು ಬಣಗಳೆರಡು..' ಹಾಡಿನ ಮೂಲಕ ಸರ್ಕಾರದ ಕಾಲೆಳೆದ ಅಭಯ್ ಪಾಟೀಲ್
ಎರಡು ತಿಂಗಳು ಇಂಟರ್ನ್‌ಶಿಪ್ ಮಾಡುವವರಿಗೆ 4 ಲಕ್ಷ ಸ್ಟೈಫಂಡ್ ಕೊಡುತ್ತದೆ ಈ ಕಾಲೇಜು