
ನವದೆಹಲಿ (ಮೇ.14): ಮಾಜಿ ಸಚಿವ ಕಪಿಲ್ ಮಿಶ್ರಾ ಪತ್ರಿಕಾಗೋಷ್ಟಿ ವೇಳೆ ನಿಶ್ಯಕ್ತರಾಗಿ ಕುಸಿದು ಬಿದ್ದಿದ್ದಾರೆ. ಬುಧವಾರದಿಂದ ಉಪವಾಸ ಸತ್ಯಾಗ್ರಹ ಮಾಡಿದ ಪರಿಣಾಮವಾಗಿ ಪತ್ರಿಕಾಗೋಷ್ಟಿ ವೇಳೆ ಕುಸಿದು ಬಿದ್ದಿದ್ದು, ಕೂಡಲೇ ಆರ್ ಎಂಎಲ್ ಆಸ್ಪತ್ರೆಗೆ ಕರೆದುಕೊಂಡು ಹೋಗಲಾಗಿದೆ.
ನಿಶ್ಯಕ್ತಿ ಹಾಗೂ ನಿರ್ಜಲೀಕರಣದಿಂದ ಬಳಲುತ್ತಿದ್ದಾರೆ. ಉಳಿದಂತೆ ಯಾವುದೇ ಸಮಸ್ಯೆಯಿಲ್ಲವೆಂದು ಆರ್ ಎಂಎಲ್ ವೈದ್ಯರು ಹೇಳಿದ್ದಾರೆ.
ಅರವಿಂದ್ ಕೇಜ್ರಿವಾಲ್ ನ ಕೆಲ ಆಪ್ತರು ಸಾರ್ವಜನಿಕರಿಂದ ಪಡೆದ ದೇಣಿಗೆಯನ್ನು ಮುಚ್ಚಿಟ್ಟು ಚುನಾವಣಾ ಆಯೋಗಕ್ಕೆ ಸುಳ್ಳು ಹೇಳಿದ್ದಾರೆ ಎಂದು ಆರೋಪಿಸಿ ಈ ಸಂಬಂಧ ದಾಖಲೆ ಸಮೇತ ಪತ್ರಿಕಾಗೋಷ್ಟಿ ಕರೆದಿದ್ದರು. ನನ್ನ ಬಳಿ ಆಪ್ ಮುಖಂಡರ ಬಹುಹಗರಣದ ದಾಖಲೆಗಳಿವೆ. ಕೇಜ್ರಿವಾಲನ್ನು ಅವರ ಕುರ್ಚಿಯಿಂದ ಕೆಳಗಿಳಿಸಿ ಜೈಲಿಗೆ ಕಳುಹಿಸುತ್ತೇನೆ ಎಂದು ಹೇಳಿದರು. ಬಳಿಕ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸುತ್ತಿರುವಾಗ ಇದ್ದಕ್ಕಿದ್ದಂತೆ ಕುಸಿದು ಬಿದ್ದರು. ಕೂಡಲೇ ಆಸ್ಪತ್ರೆಗೆ ದಾಖಲಿಸಲಾಯಿತು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.