ರಾಜಕೀಯ ಹೈಡ್ರಾಮಾ: ಗೃಹ ಬಂಧನದಲ್ಲಿ ಮಾಜಿ ಮುಖ್ಯಮಂತ್ರಿ!

Published : Sep 11, 2019, 03:26 PM IST
ರಾಜಕೀಯ ಹೈಡ್ರಾಮಾ: ಗೃಹ ಬಂಧನದಲ್ಲಿ ಮಾಜಿ ಮುಖ್ಯಮಂತ್ರಿ!

ಸಾರಾಂಶ

ಮಗ್ಗಲು  ಬದಲಿಸಿದ ದ್ವೇಷ ರಾಜಕಾರಣ| ಮಾಜಿ ಮುಖ್ಯಮಂತ್ರಿಯನ್ನೇ ಗೃಹ ಬಂಧನದಲ್ಲಿರಿಸಿದ ಸರ್ಕಾರ| ಮತ್ತೊಂದು ಮಜಲು ತಲುಪಿದ ಆಂಧ್ರದ ದ್ವೇಷ ರಾಜಕಾರಣ| 100 ದಿನ ಪೂರೈಸಿದ ಜಗನ್ ಮೋಹನ್ ರೆಡ್ಡಿ ಸರ್ಕಾರ| ಸರ್ಕಾರದ ವಿರುದ್ಧ ಪ್ರತಿಭಟನೆ ಹಮ್ಮಿಕೊಂಡಿದ್ದ ಪ್ರತಿಪಕ್ಷ ಟಿಡಿಪಿ| ಪ್ರತಿಭಟನೆಗೆ ಮುಂದಾದ ಮಾಜಿ ಸಿಎಂ ಚಂದ್ರಬಾಬು ನಾಯ್ಡು ಗೃಹ ಬಂಧನ| ನಾಯ್ಡು ಪುತ್ರ ಸಾರಾ ಲೋಕೇಶ್ ವರನ್ನೂ ಗೃಹ ಬಂಧನದಲ್ಲಿರಿಸಿದ ಪೊಲೀಸರು| ಆಂಧ್ರಪ್ರದೇಶದಲ್ಲಿ ತೀವ್ರ ರಾಜಕೀಯ ಉದ್ವಿಗ್ನ ಪರಿಸ್ಥಿತಿ| ಸರ್ಕಾರ ಮಾನವ ಹಕ್ಕು ಉಲ್ಲಂಘಿಸುತ್ತಿದೆ ಎಂದು ಹರಿಹಾಯ್ದ ಚಂದ್ರಬಾಬು ನಾಯ್ಡು|

ವಿಜಯವಾಡ(ಸೆ.11): ಆಂಧ್ರದ ದ್ವೇಷ ರಾಜಕಾರಣ ಮತ್ತೊಂದು ಮಜಲು ತಲುಪಿದ್ದು, ರಾಜ್ಯ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸಲಿದ್ದ ಮಾಜಿ ಸಿಎಂ ಚಂದ್ರಬಾಬು ನಾಯ್ಡು ಅವರನ್ನು ಗೃಹ ಬಂಧನಕ್ಕೆ ಗುರಿಪಡಿಸಲಾಗಿದೆ. 

ಆಂಧ್ರಪ್ರದೇಶ ಮುಖ್ಯಮಂತ್ರಿ ವೈ.ಎಸ್.ಜಗನ್ ಮೋಹನ್ ರೆಡ್ಡಿ ನೇತೃತ್ವದ ಸರ್ಕಾರ 100 ದಿನಗಳನ್ನು ಪೂರ್ಣಗೊಳಿಸಿದ್ದು,  ಸರ್ಕಾರದ ವಿರುದ್ದ ಆಯೋಜಿಸಲಾಗಿರುವ ಪ್ರತಿಭಟನೆಯಲ್ಲಿ ಪಾಲ್ಗೊಳ್ಳದಂತೆ ತಡೆಯಲು ಚಂದ್ರಬಾಬು ನಾಯ್ಡು ಹಾಗೂ ಪುತ್ರ ನಾರಾ ಲೋಕೇಶ್ ಅವರನ್ನು ಗೃಹ ಬಂಧನದಲ್ಲಿರಿಸಲಾಗಿದೆ.

ಚಂದ್ರಬಾಬು ನಾಯ್ಡು ಅವರನ್ನು ಅವರ ಮನೆಯಲ್ಲಿ ವಶಕ್ಕೆ ಪಡೆದಿರುವ ಪೊಲೀಸರು,  ಸರ್ಕಾರದ ವಿರುದ್ಧದ ಪ್ರತಿಭಟನೆಯಲ್ಲಿ ಪಾಲ್ಗೊಳ್ಳದಂತೆ ತಡೆದಿದ್ದಾರೆ. ಈ ವೇಳೆ ಟಿಡಿಪಿ ಕಾರ್ಯಕರ್ತರು ಹಾಗೂ ಪೊಲೀಸರ ನಡುವೆ ಘರ್ಷಣೆ ಕೀಡ ನಡೆದಿದೆ.

ಇದೇ ವೇಳೆ ತೆಲುಗು ದೇಶಂ ಪಕ್ಷದ ಹಲವು ಹಿರಿಯ ನಾಯಕರನ್ನೂ ಗೃಹ ಬಂಧನದಲ್ಲಿರಿಸಲಾಗಿದ್ದು, ಆಂಧ್ರದಲ್ಲಿ ತೀವ್ರ ರಾಜಕೀಯ ಉದ್ವಿಗ್ನ ಪರಿಸ್ಥಿತಿ ಉದ್ಭವವಾಗಿದೆ. 

ಆಡಳಿತಾರೂಢ ಸರ್ಕಾರ ಮಾನವ ಹಕ್ಕು ಹಾಗೂ ಮೂಲಭೂತ ಹಕ್ಕುಗಳನ್ನು ಉಲ್ಲಂಘಿಸುತ್ತಿದೆ. ಈ ರೀತಿಯ ಕೀಳು ರಾಜಕಾರಣದಿಂದ ನಮ್ಮ ಧ್ವನಿ ಅಡಗಿಸಲು ಸಾಧ್ಯವಿಲ್ಲ ಎಂದು ಚಂದ್ರಬಾಬು ನಾಯ್ಡು ಜಗನ್ ಮೋಹನ್ ರೆಡ್ಡಿ ಸರ್ಕಾರದ ವಿರುದ್ಧ ಹರಿಹಾಯ್ದಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಬೆಂಗಳೂರಿನ ಬೀದಿ ನಾಯಿಗಳಿಗೆ ಪ್ರತಿನಿತ್ಯ 2 ಬಾರಿ ಚಿಕನ್‌ ರೈಸ್‌ !
ಅಧಿವೇಶನ ವೇಳೆ ಹಳೆಯ ಬೇಡಿಕೆಗಳ ಹೊಸ ಕೂಗು!