
ಬೆಂಗಳೂರು, [ನ.14]: ಕೋಟ್ಯಾಂತರ ರುಪಾಯಿ ಅಂಬಿಡೆಂಟ್ ಡೀಲ್ ಪ್ರಕರಣಕ್ಕೆ ಸಂಬಂಧ ಪರಪ್ಪನ ಅಗ್ರಹಾರ ಜೈಲು ಪಾಲಾಗಿರುವ ಮಾಜಿ ಸಚಿವ ಜನಾರ್ದನ ರೆಡ್ಡಿಗೆ ಜಾಮೀನು ಸಿಕ್ಕಿದೆ.
ಇಂದು [ಬುಧವಾರ] ರೆಡ್ಡಿ ಜಾಮೀನು ಅರ್ಜಿ ವಿಚಾರಣೆ ನಡೆಸಿದ 1ನೇ ಸೆಷನ್ಸ್ ಕೋರ್ಟ್ ರೆಡ್ಡಿಗೆ ಜಾಮೀನು ನೀಡಿ ಆದೇಶ ಹೊರಡಿಸಿದೆ. ಈ ಮೂಲಕ ಜನಾರ್ದನ ರೆಡ್ಡಿ 4 ದಿನಗಳ ಜೈಲು ವಾಸ ಅಂತ್ಯವಾದಂತಾಗಿದೆ.
ಆಂಬಿಡೆಂಟ್ & ರೆಡ್ಡಿ: ಸುವರ್ಣನ್ಯೂಸ್ನಿಂದ Super Exclusive ವರದಿಗಳ ಸರಮಾಲೆ
ಅಂಬಿಡೆಂಟ್ ಕಂಪನಿಯಲ್ಲಿ ನಡೆದ ಕೋಟ್ಯಾಂತರ ರೂಪಾಯಿ ಅವ್ಯವಹಾರದ ಕುರಿತು ಜಾರಿ ನಿರ್ದೇಶನಾಲಯ ದಾಖಲಿಸಿದ್ದ ಪ್ರಕರಣದ ರದ್ದತಿಗಾಗಿ ಡೀಲ್ ನಡೆದಿದೆ ಎನ್ನಲಾಗಿದೆ.
ಆ ಡೀಲ್ ಡೀಲ್ನಲ್ಲಿ ಮಾಜಿ ಸಚಿವ ಗಾಲಿ ಜನಾರ್ದನ ರೆಡ್ಡಿ ಭಾಗಿಯಾಗಿದ್ದಾರೆ ಎನ್ನಲಾಗಿತ್ತು. ಇದ್ರಿಂದ ಸಿಸಿಬಿ ಪೊಲೀಸ್ ರೆಡ್ಡಿಯನ್ನ ನವೆಂಬರ್ 11ರಂದು ಬಂಧಿಸಿ, ನ್ಯಾಯಾಧೀಶರ ಮುಮದೆ ಹಾಜರುಪಡಿಸಲಾಗಿತ್ತು.
ಬಳಿಕ 1ನೇ ಸೆಷನ್ಸ್ ನ್ಯಾಯಾಲಯದ ನ್ಯಾಯಾಧೀಶ ಜಗದೀಶ್ ಅವರು ರೆಡ್ಡಿಗೆ 14 ದಿನಗಳ ನ್ಯಾಯಾಂಗ ಬಂಧನ ವಿಧಿಸಿ ಆದೇಶ ನೀಡಿದ್ದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.