
ನವದೆಹಲಿ(ಫೆ.04): ಮಾಜಿ ಪ್ರಧಾನಿ ಎಚ್ಡಿ ದೇವೇಗೌಡ ಅವರ ಅಕಾರಾವಯಲ್ಲಿ ಸಿಬಿಐ ನಿರ್ದೇಶಕರಾಗಿದ್ದ ಕರ್ನಾಟಕ ಕೇಡರ್ನ ಐಪಿಎಸ್ ಅಕಾರಿ ಜೋಗಿಂದರ್ ಸಿಂಗ್ ಅವರು ನಿಧನರಾಗಿದ್ದಾರೆ.
‘‘ಸಿಬಿಐನ ಮಾಜಿ ನಿರ್ದೇಶಕ ಸರ್ದಾರ್ ಜೋಗಿಂದರ್ ಸಿಂಗ್ ಅಸುನೀಗಿದ್ದು, ಅವರ ಆತ್ಮಕ್ಕೆ ಶಾಂತಿ ಸಿಗಲಿ. ಅವರ ಅಂತಿಮ ಸಂಸ್ಕಾರ ಶನಿವಾರ ಉತ್ತರ ದೆಹಲಿಯ ಲೋಯಲ್ಲಿ ನಡೆಯಲಿದೆ,’’ ಎಂದು ಕಾಂಗ್ರೆಸ್ ವಕ್ತಾರ ಮನೀಶ್ ತಿವಾರಿ ಟ್ವೀಟ್ ಮಾಡಿದ್ದಾರೆ. ಕಳೆದ ಹಲವು ದಿನಗಳಿಂದ ಕಾಯಿಲೆಪೀಡಿತರಾಗಿದ್ದ ಜೋಗಿಂದರ್ ಶುಕ್ರವಾರ ಕೊನೆಯುಸಿರೆಳೆದಿದ್ದಾರೆ ಎಂದು ಕುಟುಂಬದ ಮೂಲಗಳು ತಿಳಿಸಿವೆ. 20ನೇ ವಯಸ್ಸಿನಲ್ಲಿಯೇ ಪೊಲೀಸ್ ಇಲಾಖೆಗೆ ಸೇರಿದ ಜೋಗಿಂದರ್ ಸಿಂಗ್, ಮಾಜಿ ಪ್ರಧಾನಿ ದೇವೇಗೌಡರ ಅಕಾರವಯಲ್ಲಿ ಸಿಬಿಐ ನಿರ್ದೇಶರಾಗಿದ್ದರು. ಈ ವೇಳೆ, ರಾಜಕೀಯ ವಲಯದಲ್ಲಿ ಸಂಚಲನ ಮೂಡಿಸಿದ್ದ ಬೋೆರ್ಸ್, ಬಿಹಾರದ ಮೇವು ಹಗರಣ, ಜೆಎಂಎಂ ಸಂಸದನ ಲಂಚ ಹಗರಣ, 130 ಕೋಟಿ ವೌಲ್ಯದ ಯೂರಿಯಾ ಮತ್ತು ಟೆಲಿಕಾಮ್ ಸೇರಿದಂತೆ ಇನ್ನಿತರ ಪ್ರಕರಣಗಳ ತನಿಖೆ ನಡೆಸಿದ್ದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.