ಧರಂಸಿಂಗ್ ವಿಧಿವಶ ಹಿನ್ನೆಲೆ ಮೂರು ದಿನಗಳ ಕಾಲ ಶೋಕಾಚರಣೆ; ಶಾಲಾ ಕಾಲೇಜುಗಳಿಗೆ ರಜೆ

By Suvarna Web DeskFirst Published Jul 27, 2017, 1:32 PM IST
Highlights

ಬೆಂಗಳೂರು ಕರ್ನಾಟಕದ ಮಾಜಿ ಸಿಎಂ ಧರಂ ಸಿಂಗ್ ವಿಧಿವಶರಾಗಿದ್ದಾರೆ. ಈ ಹಿನ್ನೆಲೆಯಲ್ಲಿ ಕರ್ನಾಟಕ ಸರ್ಕಾರ ಮೂರು ದಿನಗಳ ಕಾಲ ಶೋಕಾಚರಣೆ ಘೋಷಿಸಿದೆ.

ಬೆಂಗಳೂರು(ಜೂ.27): ಕರ್ನಾಟಕದ ಮಾಜಿ ಸಿಎಂ ಧರಂ ಸಿಂಗ್ ವಿಧಿವಶರಾಗಿದ್ದಾರೆ. ಕೆಲ ದಿನಗಳಿಂದ ಅನಾರೋಗ್ಯಕ್ಕೆ ತುತ್ತಾಗಿದ್ದ ಅವರನ್ನು ಬೆಂಗಳೂರಿನ ಎಂ. ಎಸ್ ರಾಮಯ್ಯ ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಅವರು ಸಾವನ್ನಪ್ಪಿದ್ದಾರೆ.

ಧರಂ ಸಿಂಗ್ ಸಾವಿನ ದುಃಖದಲ್ಲಿ ಕರ್ನಾಟಕ ಸರ್ಕಾರ ಮೂರು ದಿನಗಳ ಕಾಲ ಶೋಕಾಚರಣೆ ಘೋಷಿಸಿದೆ. ಅಲ್ಲದೇ  ಸರ್ಕಾರಿ ಕಚೇರಿಗಳು, ಶಾಲೆ, ಕಾಲೇಜುಗಳಿಗೆ ಅರ್ಧ ದಿನ ರಜೆ ಘೋಷಿಸಲಾಗಿದೆ. ಬೀದರ್, ಕಲಬುರಗಿ ಜಿಲ್ಲೆಯಲ್ಲಿ ನಾಳೆ ಸರ್ಕಾರಿ ಕಚೇರಿಗಳು, ಶಾಲೆ, ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.

Latest Videos

 

click me!