
ದಾವಣಗೆರೆ[ಡಿ.04] ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ 5 ವರ್ಷಗಳ ಕಾಲ ಅಧಿಕಾರ ನಡೆಸಿತ್ತು. ಮೊದಲಿನಿಂದಲೂ ಸಿದ್ದರಾಮಯ್ಯ ಮೈಸೂರು ಚಾಮುಂಡೇಶ್ವರಿ ಕ್ಷೇತ್ರದಿಂದ ಸ್ಪರ್ಧೆ ಮಾಡಲು ಸಿದ್ಧತೆ ಮಾಡಿಕೊಂಡಿದ್ದರು. ಆದರೆ ಅದ್ಯಾವ ಮೂಲದ ಮಾಹಿತಿಯಿಂದಲೋ ಏನೋ ಅಂತಿಮವಾಗಿ ಬಾದಾಮಿಯಿಂದ ಸ್ಪರ್ಧೆ ಮಾಡಿದರು.
ಚಾಮುಂಡೇಶ್ವರಿಯಲ್ಲಿ ಜೆಡಿಎಸ್ನ ಜಿ.ಟಿ.ದೇವೇಗೌಡರ ವಿರುದ್ಧ ಸಿದ್ದರಾಮಯ್ಯ ಸೋಲು ಕಾಣಬೇಕಾಯಿತು. ಈಗ ಸಿದ್ದರಾಮಯ್ಯ ತಮ್ಮ ಸೋಲಿನ ಪರಾಮರ್ಶೆ ಮಾಡಿದ್ದಾರೆ. ಚಾಮುಂಡಿ ಸೋಲು ಈಗಲೂ ದಿಗ್ಭ್ರಮೆ ಮೂಡಿಸುತ್ತದೆ. ಅಷ್ಟೊಂದು ಕೆಲಸ ಮಾಡಿದರೂ ಜನ ಯಾವುದಕ್ಕೆ ಓಟು ಕೊಡ್ತಾರೆ ಅರ್ಥವಾಗುತ್ತಿಲ್ಲ ಎಂದು ಹೇಳಿದ್ದಾರೆ.
ಸಮನ್ವಯ ಸಮಿತಿ ಅಧ್ಯಕ್ಷ ಅಂದ್ರೆ ಅಮ್ಮವರ ಗಂಡನಾ?: ಸಿದ್ದುಗೆ ಟಾಂಗ್
ಹರಪನಹಳ್ಳಿಯಲ್ಲಿ ಸಿದ್ದರಾಮಯ್ಯ ಈ ಹೇಳಿಕೆ ನೀಡಿದ್ದಾರೆ. ದೋಸ್ತಿ ಸರ್ಕಾರದ ಸಮನ್ವಯ ಸಮಿತಿ ನೇತೃತ್ವವನ್ನು ಸಿದ್ದರಾಮಯ್ಯ ವಹಿಸಿಕೊಂಡಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.