ಕಾಂಗ್ರೆಸ್ ಮುಖಂಡರಿಗೆ ಸಿದ್ದರಾಮಯ್ಯರಿಂದ ಔತಣಕೂಟ

Published : Aug 01, 2018, 11:24 AM IST
ಕಾಂಗ್ರೆಸ್ ಮುಖಂಡರಿಗೆ ಸಿದ್ದರಾಮಯ್ಯರಿಂದ  ಔತಣಕೂಟ

ಸಾರಾಂಶ

ಮಾಜಿ ಸಿಎಂ ಸಿದ್ದರಾಮಯ್ಯ ಕಾಂಗ್ರೆಸ್ ಸಚಿವರಿಗೆ ಬೆಂಗಳೂರಿನಲ್ಲಿಂದು ಔತಣಕೂಟ ಆಯೋಜನೆ ಮಾಡಿದ್ದಾರೆ. ಕಾಂಗ್ರೆಸ್’ನ ಎಲ್ಲಾ ಸಚಿವರು ಮತ್ತು ಪ್ರಮುಖ ನಾಯಕರಿಗೆ ಆಹ್ವಾನ ನೀಡಲಾಗಿದೆ. ರಾತ್ರಿ 8 ಗಂಟೆಗೆ ಸಿದ್ದರಾಮಯ್ಯ ಆಯೋಜಿಸಿರುವ ಔತಣಕೂಟ ನಡೆಯಲಿದೆ.  

ಬೆಂಗಳೂರು (ಆ. 01): ಮಾಜಿ ಸಿಎಂ ಸಿದ್ದರಾಮಯ್ಯ ಕಾಂಗ್ರೆಸ್ ಸಚಿವರಿಗೆ ಬೆಂಗಳೂರಿನಲ್ಲಿಂದು ಔತಣಕೂಟ ಆಯೋಜನೆ ಮಾಡಿದ್ದಾರೆ. 

ಕಾಂಗ್ರೆಸ್’ನ ಎಲ್ಲಾ ಸಚಿವರು ಮತ್ತು ಪ್ರಮುಖ ನಾಯಕರಿಗೆ ಆಹ್ವಾನ ನೀಡಲಾಗಿದೆ. ರಾತ್ರಿ 8 ಗಂಟೆಗೆ ಸಿದ್ದರಾಮಯ್ಯ ಆಯೋಜಿಸಿರುವ ಔತಣಕೂಟ ನಡೆಯಲಿದೆ.  ಅಧಿವೇಶನದ ಬಳಿಕ ಮೊದಲ ಬಾರಿಗೆ ಸಚಿವರಿಗೆ  ಔತಣಕೂಟ ಆಯೋಜನೆ ಮಾಡಲಾಗಿದೆ.  ಸಿದ್ಧರಾಮಯ್ಯ ಆಯೋಜಿಸಿರುವ ಔತಣಕೂಟದ ಬಗ್ಗೆ ರಾಜಕೀಯ ವಲಯದಲ್ಲಿ ಕುತೂಹಲ ಮೂಡಿದೆ. 

ಪ್ರಸ್ತುತ ರಾಜಕೀಯ ವಿದ್ಯಮಾನಗಳ ಕುರಿತು ಈ ಸಂದರ್ಭದಲ್ಲಿ ಚರ್ಚೆ ನಡೆಸುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ. ಲೋಕಸಭಾ ಚುನಾವಣಾ ಸಿದ್ಧತೆಯ ಕುರಿತು ಚರ್ಚೆ ನಡೆಸುವ ಸಾಧ್ಯತೆ ಇದೆ ಎನ್ನಲಾಗಿದೆ.  ಜೆಡಿಎಸ್ ಜೊತೆಗಿನ ಮೈತ್ರಿಯಲ್ಲಿ ಆಗುತ್ತಿರುವ ತೊಂದರೆಗಳ ಕುರಿತು ಸಮಾಲೋಚನೆ ನಡೆಸಲಾಗುತ್ತದೆ.  ಪಕ್ಷದ ಪ್ರಮುಖ ನಾಯಕರು ಸಹ ಇಂದಿನ ಔತಣಕೂಟದಲ್ಲಿ ಭಾಗಿಯಾಗಿ ಚರ್ಚೆ ನಡೆಸಲಿದ್ದಾರೆ. 

ಪಕ್ಷ ಸಂಘಟನೆ ಕುರಿತು ಚರ್ಚಿಸಲು ಸಿದ್ಧರಾಮಯ್ಯ ಆಯೋಜಿಸಿರುವ ಔತಣಕೂಟ ರಾಜಕೀಯ ಚರ್ಚೆಗೆ ವೇದಿಕೆಯಾಗಲಿದೆ. 
 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ರಾಮನಗರ: ರಸ್ತೆಗೆ ಕುರಿಗಳು ಅಡ್ಡಿ, ಹಾರ್ನ್ ಮಾಡಿದ್ದಕ್ಕೆ ಬಸ್ ಚಾಲಕನ ಮೇಲೆ ಗ್ರಾಮಸ್ಥರಿಂದ ಹಲ್ಲೆ!
ಕನ್ನಡಪ್ರಭ & ಸುವರ್ಣನ್ಯೂಸ್‌ನಿಂದ ಅಸಾಮಾನ್ಯ ಕನ್ನಡಿಗರಿಗೆ ಗೌರವ: 'ಆಯುರ್ ಭೂಷಣ' ಪ್ರಶಸ್ತಿ ಪ್ರದಾನ