
ಬೆಂಗಳೂರು : ವಿಧಾನಸಭೆ ಚುನಾವಣೆ ಬಳಿಕ ಸಿದ್ದರಾಮಯ್ಯ ಅವರು 2ನೇ ಬಾರಿ ವಿದೇಶ ಪ್ರವಾಸ ಕೈಗೊಳ್ಳುತ್ತಿದ್ದಾರೆ. ಕಳೆದ ಬಾರಿ ಸಿದ್ದರಾಮಯ್ಯ ವಿದೇಶಕ್ಕೆ ತೆರಳಿದ್ದಾಗ ರಾಜ್ಯ ರಾಜಕೀಯದಲ್ಲಿ ತೀವ್ರ ಬಿಕ್ಕಟ್ಟು ಸೃಷ್ಟಿಯಾಗಿತ್ತು.
ಜಾರಕಿಹೊಳಿ ಸಹೋದರರು ಸರ್ಕಾರವನ್ನೇ ಬೀಳಿಸುವ ಮಟ್ಟಕ್ಕೆ ಹೋಗಿದ್ದರು. ಇದೀಗ ಸಿದ್ದರಾಮಯ್ಯ ಅವರು ವಿದೇಶ ಪ್ರವಾಸ ಕ್ಕೆ ತೆರಳುತ್ತಿರುವುದರಿಂದ ಅತೃಪ್ತ ಶಾಸಕರು ಮತ್ತೆ ಸರ್ಕಾರ ಅಸ್ಥಿರಗೊಳಿಸುವ ಚಟುವಟಿಕೆಗಳಲ್ಲಿ ವಾಲುತ್ತಾರಾ ಎಂಬ ಅನುಮಾನವೂ ಕಾಡತೊಡಗಿದೆ.
ಅದಲ್ಲದೆ, ಈ ಬಾರಿಯೂ ಅಂತಹದೇ ಘಟನೆಯ ಮುನ್ಸೂಚನೆ ಇದ್ದು ಅಥವಾ ಅಂತಹ ಘಟನೆಯನ್ನು ನಿರೀಕ್ಷಿಸಿ ಸಿದ್ದರಾಮಯ್ಯ ಅವರು ವಿದೇಶಕ್ಕೆ ಹೋಗುತ್ತಿದ್ದಾರೆಯೇ ಎಂಬ ಮಾತುಗಳೂ ಹರಿದಾಡುತ್ತಿವೆ.
ಮತ್ತೊಂದೆಡೆ ಡಿ.22ರಂದು ಸಚಿವ ಸಂಪುಟ ವಿಸ್ತರಣೆಯಾಗಲಿದೆ ಎಂದು ಸಮನ್ವಯ ಸಮಿತಿ ಸಭೆ ಬಳಿಕ ತೀರ್ಮಾನ ಆಗಿದೆ. ಈ ಹಿನ್ನೆಲೆಯಲ್ಲಿ ಸಚಿವ ಸ್ಥಾನದ ಆಕಾಂಕ್ಷಿಗಳು ದುಂಬಾಲು ಬೀಳಬಹುದು ಎಂದು ಅವರಿಂದ ಅಂತರ ಕಾಯ್ದುಕೊಳ್ಳಲು ಪ್ರವಾಸ ಮಾಡುತ್ತಿದ್ದಾರೆ ಎಂಬ ಮಾತು ಕೇಳಿಬಂದಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.