11 ತಿಂಗಳಲ್ಲಿಯೇ ಮುಖ್ಯಮಂತ್ರಿ ಸ್ಥಾನದಿಂದ ಕೆಳಗಿಳಿದು ಓಡಿಹೋದವರಲ್ವೇ... ಸಿದ್ದು ಗುದ್ದು

By Web DeskFirst Published Dec 31, 2018, 6:22 PM IST
Highlights

ಸಿದ್ದಾರಾಮಯ್ಯ ಮತ್ತು ಸದಾನಂದ ಗೌಡರ ನಡುವೆ ಟ್ವೀಟ್ ಸಮರ ಮುಂದುವರಿದಿದೆ. ಕುದುರೆ ವ್ಯಾಪಾರದಿಂದ ಶುರುವಾದ ಟ್ವೀಟ್ ಸಮರ ಕುದುರೆ ಏರಲಾರದವನು... ಕುದುರೆಯಿಂದ ಇಳಿದು ಓಡಿ ಹೋದವನು...ಹೀಗೆ ಶಬ್ದಗಳ ಪ್ರಯೋಗ ಮುಂದುವರಿದಿದೆ.

ಬೆಂಗಳೂರು[ಡಿ.31]   ಸದಾನಂದ ಗೌಡ  ಅವರೇ, ನಿಮ್ಮ ಅನುಭವವನ್ನು ಸರಿಯಾಗಿ ಹೇಳಿದ್ದೀರಿ, 'ಕುದುರೆ ಏರಲಾರದವನು ಶೂರನೂ ಅಲ್ಲ, ಧೀರನೂ ಅಲ್ಲ...' ಎಷ್ಟೆಂದರೂ , ಹನ್ನೊಂದು ತಿಂಗಳಲ್ಲಿಯೇ ಮುಖ್ಯಮಂತ್ರಿ ಸ್ಥಾನದಿಂದ ಕೆಳಗಿಳಿದು ಓಡಿಹೋದವರಲ್ವೇ ನೀವು..ಹೀಗೆಂದು ಮಾಜಿ ಸಿಎಂ ಸಿದ್ದರಾಮಯ್ಯ ಮಾಜಿ ಸಿಎಂ , ಕೇಂದ್ರ ಸಚಿವ ಸದಾನಂದ ಗೌಡರ ಕಾಲೆಳೆದಿದ್ದಾರೆ.

 ಕುದುರೆ ವ್ಯಾಪಾರಕ್ಕೆ ನಿಂತಿರುವ ಬಿಜೆಪಿ ಪ್ರತಿ ಶಾಸಕರಿಗೆ ರೂ.25 ರಿಂದ 30 ಕೋಟಿ ಹಣ ನೀಡಿ ಖರೀದಿಸಲು ಮುಂದಾಗಿದೆ ಎಂಬ ಸಿದ್ದರಾಮಯ್ಯ ಟ್ವೀಟ್‌ಗೆ ಸದಾನಂದ ಗೌಡ ಕೌಂಟರ್ ನೀಡಿದ್ದರು.

Latest Videos

ಬಿಎಸ್‌ವೈ, ಕತ್ತಿ ಅತೃಪ್ತ ಆತ್ಮಗಳು: ಸಿದ್ದು ಕಿಡಿ!

ಸರ್ಕಾರ ಬೀಳಿಸಲು ಪ್ರಯತ್ನಿಸುತ್ತಿರುವುದು ಒಂದನ್ನು ಬಿಟ್ಟು ವಿರೋಧ ಪಕ್ಷವಾಗಿ ಕರ್ನಾಟಕ ಬಿಜೆಪಿ ಇಷ್ಟು ದಿನ ಬೇರೆ ಏನು ಮಾಡಿದೆ? ಎಂದು ಸಿದ್ದರಾಮಯ್ಯ ಬಿಜೆಪಿ ಕೆಣಕಿದ್ದರು. ಇದಕ್ಕೆ ಪ್ರತಿಯಾಗಿ ದಾಳಿ ಮಾಡಿರುವ ಸದಾನಂದ ಗೌಡ  ‘ಕುದುರೆ ಏರಲಾರದವನು ಧೀರನೂ ಅಲ್ಲ ಶೂರನೂ ಅಲ್ಲ . ನಿಮ್ಮ ಪಕ್ಷದ ಹುಳುಕು ಮುಚ್ಚಿ ಹಾಕಿಕ್ಕೊಳ್ಳಲು ಇದೊಂದು ಹೊಸ ಪ್ರಹಸನ . ಮುಲಾಜಿನ ಸರಕಾರ ನಡೆಸಲು ಮುಖ್ಯಮಂತ್ರಿಗಳಿಗೆ ಕೈ ಜೋಡಿಸಿ , ಕನ್ನಡಿಗರು ಮುಗ್ದರು ಮೂರ್ಖರಲ್ಲ ನಿಮ್ಮ ಗಿಲೀಟು ಮಾತು ನಂಬಲು’ ಎಂದು ತಿರುಗೇಟು ನೀಡಿದ್ದರು. ಈಗ ಮತ್ತೆ ಸಿದ್ದರಾಮಯ್ಯ ತಿರುಗೇಟು ನೀಡಿದ್ದಾರೆ.


 

. ಅವರೇ, ನಿಮ್ಮ ಅನುಭವವನ್ನು ಸರಿಯಾಗಿ ಹೇಳಿದ್ದೀರಿ,
'ಕುದುರೆ ಏರಲಾರದವನು ಶೂರನೂ ಅಲ್ಲ, ಧೀರನೂ ಅಲ್ಲ...'

ಎಷ್ಟೆಂದರೂ ,

ಹನ್ನೊಂದು ತಿಂಗಳಲ್ಲಿಯೇ ಮುಖ್ಯಮಂತ್ರಿ ಸ್ಥಾನದಿಂದ ಕೆಳಗಿಳಿದು ಓಡಿಹೋದವರಲ್ವೇ ನೀವು.https://t.co/c1QsVGEO2r

— Siddaramaiah (@siddaramaiah)
click me!