ಬಿಎಸ್‌ವೈಗೆ ಕಣ್ಣು ಮುಚ್ಚಿದರೆ 3 ನೇ ಮಹಡಿ ಕಾಣುತ್ತಂತೆ!

Published : Nov 11, 2018, 03:36 PM ISTUpdated : Nov 11, 2018, 04:12 PM IST
ಬಿಎಸ್‌ವೈಗೆ ಕಣ್ಣು ಮುಚ್ಚಿದರೆ 3 ನೇ ಮಹಡಿ ಕಾಣುತ್ತಂತೆ!

ಸಾರಾಂಶ

ಯಡಿಯೂರಪ್ಪ ಬಹಳ ಕನಸು ಕಾಣುತ್ತಿದ್ದಾರೆ. ಕಣ್ಣು ಮುಚ್ಚಿದರೆ ಅವರಿಗೆ ಮೂರನೇ ಮಹಡಿ ಕಾಣುತ್ತೆ.  ಹೇಗಾದ್ರೂ ಮಾಡಿ ವಿಧಾನಸೌಧಕ್ಕೆ ಹೋಗಬೇಕು ಚೀಫ್ ಮಿನಿಸ್ಟರ್ ಆಗಬೇಕು ಅಂದುಕೊಂಡಿದ್ದಾರೆ ಎಂದು ಸಿದ್ದರಾಮಯ್ಯ ಟಾಂಗ್ ನೀಡಿದ್ದಾರೆ.   

ಚಿಕ್ಕಮಗಳೂರು (ನ. 11):  ಯಡಿಯೂರಪ್ಪ ಬಹಳ ಕನಸು ಕಾಣುತ್ತಿದ್ದಾರೆ. ಕಣ್ಣು ಮುಚ್ಚಿದರೆ ಅವರಿಗೆ ಮೂರನೇ ಮಹಡಿ ಕಾಣುತ್ತೆ.  ಹೇಗಾದ್ರೂ ಮಾಡಿ ವಿಧಾನಸೌಧಕ್ಕೆ ಹೋಗಬೇಕು ಚೀಫ್ ಮಿನಿಸ್ಟರ್ ಆಗಬೇಕು ಅಂದುಕೊಂಡಿದ್ದಾರೆ ಎಂದು ಸಿದ್ದರಾಮಯ್ಯ ಟಾಂಗ್ ನೀಡಿದ್ದಾರೆ. 

ಯಡಿಯೂರಪ್ಪ ಅಧಿಕಾರಕ್ಕಾಗಿ ವಾಮಮಾರ್ಗ ಹಿಡಿಯುತ್ತಿದ್ದಾರೆ. ಅವರಿಗೆ ಮೆಜಾರಿಟಿ ಬಂದಿದೆಯಾ? ಎಂದು ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ.  ಬಿಜೆಪಿಗೆ ಬಂದಿರುವುದೇ 104 ಸೀಟು.  ಬಿಜೆಪಿಯವರ ಮಾತಿಗೆ ತಾಳಮೇಳ ಇಲ್ಲ. ಅವರ ಮಾತಿಗೆ ಕಿಮ್ಮತ್ತಿಲ್ಲ ಬಿಡಿ. ಬಿಜೆಪಿಯವರು ಕಾಂಗ್ರೆಸ್ ನಲ್ಲಿ ಸಮನ್ವಯ ಇಲ್ಲ ಅಂತಾರೆ.  ನಮ್ಮಲ್ಲಿ ಸಮನ್ವಯತೆ ಇದ್ದಿದ್ದಕ್ಕೆ ನಾಲ್ಕು ಕ್ಷೇತ್ರಗಳಲ್ಲಿ ಗೆದ್ದಿದ್ದೇವೆ ಎಂದು ಸಿದ್ದರಾಮಯ್ಯ ಹೇಳಿದ್ದಾರೆ. 

ಬಿಜೆಪಿಯವರು ಆಧಾರ ರಹಿತ ಆರೋಪ ಮಾಡುತ್ತಾರೆ. ಅವರ ಮಾತಿಗೆ ಕಿಮ್ಮತ್ತಿಲ್ಲ.  ಸಮನ್ವಯತೆ ಇದ್ದಿದ್ದಕ್ಕೆ ಬಳ್ಳಾರಿ ರಾಮನಗರ ಮಂಡ್ಯ ಜಮಖಂಡಿಯಲ್ಲಿ ನಾವು ಗೆದ್ದಿದ್ದು ಎಂದು ಚಿಕ್ಕಮಗಳೂರಿನಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. 
 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಡಿಕೆಶಿ ಸಿಎಂ ಆದ್ರೆ ಅವರ ಸಂಪುಟದಲ್ಲಿ ನಾನು ಸಚಿವ ಆಗೋಲ್ಲ: ಕೆಎನ್ ರಾಜಣ್ಣ ದೊಡ್ಡ ನಿರ್ಧಾರ!
ಅನುದಾನ ಬೇಕಾದ್ರೆ ನಾಟಿ ಕೋಳಿ ಅಡುಗೆ ಮಾಡಬೇಕಾ? ರಾಜ್ಯ ಸರ್ಕಾರಕ್ಕೆ ಸಿ.ಟಿ.ರವಿ ಪ್ರಶ್ನೆ