ಆಯುರ್ವೇದ ಚಿಕಿತ್ಸೆಗಾಗಿ ಪ್ರಕೃತಿ ಚಿಕಿತ್ಸಾ ಕೇಂದ್ರಕ್ಕೆ ಮಾಜಿ ಸಿಎಂ

First Published Jun 16, 2018, 8:37 PM IST
Highlights

ಆಯುರ್ವೇದ ಚಿಕಿತ್ಸೆಗಾಗಿ ಇಂದು ಧರ್ಮಸ್ಥಳದ ಪ್ರಕೃತಿ ಚಿಕಿತ್ಸಾ ಕೇಂದ್ರಕ್ಕೆ ಮಾಜಿ ಸಿಎಂ ಸಿದ್ದರಾಮಯ್ಯ ಆಗಮಿಸಿದ್ದಾರೆ.  ನಾಳೆಯಿಂದ ಒಟ್ಟು 10 ದಿನಗಳ ಕಾಲ ಪ್ರಕೃತಿ ಚಿಕಿತ್ಸಾ ಕೇಂದ್ರದಲ್ಲಿ ಸಿದ್ದರಾಮಯ್ಯ ಚಿಕಿತ್ಸೆ ಪಡೆಯಲಿದ್ದಾರೆ.  

ಮಂಗಳೂರು (ಜೂ. 16): ಆಯುರ್ವೇದ ಚಿಕಿತ್ಸೆಗಾಗಿ ಇಂದು ಧರ್ಮಸ್ಥಳದ ಪ್ರಕೃತಿ ಚಿಕಿತ್ಸಾ ಕೇಂದ್ರಕ್ಕೆ ಮಾಜಿ ಸಿಎಂ ಸಿದ್ದರಾಮಯ್ಯ ಆಗಮಿಸಿದ್ದಾರೆ. 

ನಾಳೆಯಿಂದ ಒಟ್ಟು 10 ದಿನಗಳ ಕಾಲ ಪ್ರಕೃತಿ ಚಿಕಿತ್ಸಾ ಕೇಂದ್ರದಲ್ಲಿ ಸಿದ್ದರಾಮಯ್ಯ ಚಿಕಿತ್ಸೆ ಪಡೆಯಲಿದ್ದಾರೆ.   ಇಂದು ರಾತ್ರಿ ಪ್ರಕೃತಿ ಚಿಕಿತ್ಸಾ ಕೇಂದ್ರಕ್ಕೆ ಆಗಮಿಸಿ ಅಲ್ಲಿಯೇ ವಿಶ್ರಾಂತಿ ಪಡೆಯಲಿದ್ದಾರೆ. 

ಚುನಾವಣೆ ಮತ್ತು ರಾಜಕೀಯ ಜಂಜಾಟದ ಬಳಿಕ ವಿಶ್ರಾಂತಿಗಾಗಿ ಆಯುರ್ವೇದ ಚಿಕಿತ್ಸೆ ಮೊರೆ ಹೋಗಿದ್ದಾರೆ ಸಿದ್ದರಾಮಯ್ಯ.  ನಾಳೆಯಿಂದ ಸಿದ್ದರಾಮಯ್ಯರಿಗೆ ಆಯುರ್ವೇದ ಚಿಕಿತ್ಸೆ ಆರಂಭವಾಗಲಿದೆ. 
 

click me!