‘ಕೈ’ಬಿಟ್ಟ ನಾಯಕನಿಗೆ ಸಚಿವ ಸ್ಥಾನ: ವಿಖೆ ಪಾಟೀಲ್ ತೆರೆದ ಫಡ್ನವೀಸ್ ಆಸ್ಥಾನ!

Published : Jun 16, 2019, 05:34 PM IST
‘ಕೈ’ಬಿಟ್ಟ ನಾಯಕನಿಗೆ ಸಚಿವ ಸ್ಥಾನ: ವಿಖೆ ಪಾಟೀಲ್ ತೆರೆದ ಫಡ್ನವೀಸ್ ಆಸ್ಥಾನ!

ಸಾರಾಂಶ

ಕಾಂಗ್ರೆಸ್ ತೊರೆದ ನಾಯಕನಿಗೆ ಬಿಜೆಪಿ ಸರ್ಕಾರದಲ್ಲಿ ಸಚಿವ ಸ್ಥಾನ| ಸಚಿವರಾಗಿ ಹಿರಿಯ ನಾಯಕ ವಿಖೆ ಪಾಟೀಲ್ ಅಧಿಕಾರ ಸ್ವೀಕಾರ| ದೇವೇಂದ್ರ ಫಡ್ನವೀಸ್ ಸರ್ಕಾರದಲ್ಲಿ ಸಚಿವರಾದ ವಿಖೆ ಪಾಟೀಲ್| ಫಡ್ನವೀಸ್ ಸಂಪುಟ ವಿಸ್ತರಣೆ ಯಶಸ್ವಿ| 

ಮುಂಬೈ(ಜೂ.16): ಇತ್ತಿಚೀಗಷ್ಟೇ ಕಾಂಗ್ರೆಸ್ ತೊರೆದು ಬಿಜೆಪಿ ಸೇರಿದ್ದ ಹಿರಿಯ ನಾಯಕ ರಾಧಾಕೃಷ್ಣ ವಿಖೆ ಪಾಟೀಲ್, ಮಹಾರಾಷ್ಟ್ರದ ದೇವೇಂದ್ರ ಫಡ್ನವೀಸ್ ಸರ್ಕಾರದಲ್ಲಿ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದ್ದಾರೆ.

ರಾಜಭವನದಲ್ಲಿ ನಡೆದ ಸರಳ ಕಾರ್ಯಕ್ರಮದಲ್ಲಿ ವಿಖೆ ಪಾಟೀಲ್ ಮತ್ತು ಮುಂಬೈ ಆಶೀಶ್ ಶೇಲರ್ ಸೇರಿದಂತೆ ಒಟ್ಸಟು 8 ಶಾಸಕರು ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದರು. ಈ ವೇಳೆ ಸಿಎಂ ದೇವೇಂದ್ರ ಫಡ್ನವೀಸ್ ಉಪಸ್ಥಿತರಿದ್ದರು.

ಮಹಾರಾಷ್ಟ್ರದ ಬಿಜೆಪಿ ಸರ್ಕಾರ ರಾಜ್ಯ ಸರ್ಕಾರದ ಸಂಪುಟ ಬದಲಾವಣೆ ಮತ್ತು ವಿಸ್ತರಣೆಗೆ ಮುಂದಾಗಿದ್ದು, ಈಗಾಗಲೇ ವಸತಿ ಸಚಿವ ಪ್ರಕಾಶ್ ಮೆಹ್ತಾ ಸೇರಿದಂತೆ 6 ಸಚಿವರು ತಮ್ಮ ಸ್ಥಾನಕ್ಕೆ ರಾಜಿನಾಮೆ ನೀಡಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಇಂಟರ್ನೆಟ್ ಇಲ್ಲದೆಯೂ UPI ಪಾವತಿ ಮಾಡಬಹುದು, *99# ಮೂಲಕ ಹಣ ಕಳುಹಿಸುವುದು ಹೇಗೆ?
ಸಿಎಂ, ಡಿಸಿಎಂ ನಡುವೆ ಬೂದಿ ಮುಚ್ಚಿದ ಕೆಂಡದ ಪರಿಸ್ಥಿತಿ: ಸಂಸದ ಜಗದೀಶ್ ಶೆಟ್ಟರ್