ಕೇಜ್ರಿ ನಿರ್ಧಾರದಿಂದ ದಿವಾಳಿ: ಮೋದಿಗೆ ಪತ್ರ ಬರೆದ ‘ಮೆಟ್ರೋ ಮ್ಯಾನ್’!

Published : Jun 14, 2019, 07:06 PM IST
ಕೇಜ್ರಿ ನಿರ್ಧಾರದಿಂದ ದಿವಾಳಿ: ಮೋದಿಗೆ ಪತ್ರ ಬರೆದ ‘ಮೆಟ್ರೋ ಮ್ಯಾನ್’!

ಸಾರಾಂಶ

ಕೇಜ್ರಿ ಮನವಿ ತಿರಸ್ಕರಿಸುವಂತೆ  ಪ್ರಧಾನಿ ಮೋದಿಗೆ ಪತ್ರ| ದೆಹಲಿ ಮೆಟ್ರೋದಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣ| ದೆಹಲಿ ಸರ್ಕಾರದ ನಿರ್ಧಾರ ಟೀಕಿಸಿದ ಮೆಟ್ರೋ ಮ್ಯಾನ್| ಮೆಟ್ರೋ ಮ್ಯಾನ್ ಖ್ಯಾತಿಯ ದೆಹಲಿ ಮೆಟ್ರೋ ಮಾಜಿ ಮುಖ್ಯಸ್ಥ ಇ ಶ್ರೀಧರನ್| 

ನವದೆಹಲಿ(ಜೂ.14): ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಅವರ ಮೆಟ್ರೋದಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣದ ನಿರ್ಧಾರವನ್ನು, ದೆಹಲಿ ಮೆಟ್ರೋ ಮಾಜಿ ಮುಖ್ಯಸ್ಥ ಇ ಶ್ರೀಧರನ್ ಟೀಕಿಸಿದ್ದಾರೆ.

ಈ ಕುರಿತು ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದಿರುವ ಶ್ರೀಧರನ್, ದೆಹಲಿ ಸರ್ಕಾರದ ನಿರ್ಣಯದಿಂದ  ಸಂಸ್ಥೆ ದಿವಾಳಿಯಾಗುವ ಸಾಧ್ಯತೆ ಇದೆ ಎಂದು ಎಚ್ಚರಿಸಿದ್ದಾರೆ.

ಮೆಟ್ರೋದಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣಕ್ಕೆ ಅವಕಾಶ ಕೋರಿ ದೆಹಲಿ ಸರ್ಕಾರ ಕಳುಹಿಸಿರುವ ಮನವಿ ಪತ್ರವನ್ನು ತಿರಸ್ಕರಿಸುವಂತೆ ಶ್ರೀಧರನ್ ಮೋದಿಗೆ ಬರೆದ ಪತ್ರದಲ್ಲಿ ತಿಳಿಸಿದ್ದಾರೆ.

2002ರಲ್ಲಿ ದೆಹಲಿ ಮೆಟ್ರೋ ಕಾಮಗಾರಿ ಉಸ್ತುವಾರಿ ವಹಿಸಿಕೊಂಡಿದ್ದ ಶ್ರೀಧರನ್, ಯಶಸ್ವಿಯಾಗಿ ಮೆಟ್ರೋ ಯೋಜನೆ ಪೂರ್ಣಗೊಳಿಸಿದ್ದರು. ಈ ಹಿನ್ನೆಲೆಯಲ್ಲಿ ಶ್ರೀಧರನ್ ಅವರನ್ನು ಮೆಟ್ರೋ ಮ್ಯಾನ್ ಎಂದೇ ಕರೆಯಲಾಗುತ್ತದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

'ಏಯ್, ಹಾಗೆಲ್ಲಾ ನಾಟಿ ಕೋಳಿ ಬಿಡಬಾರದು, ಏನೂ ಆಗೊಲ್ಲ ತಿನ್ನಬೇಕು': ಆರ್. ಅಶೋಕ್‌ಗೆ ಸಿದ್ದರಾಮಯ್ಯ ಕಿವಿಮಾತು!
ದ್ವೇಷ ಭಾಷಣ ತಡೆಗೆ ಹೊಸ ಕಾನೂನು: ಈ ಕಾಯ್ದೆ ತರ್ತಿರೋ ಟಾರ್ಗೆಟ್ ನಾನೇ ಎಂದ ಯತ್ನಾಳ್!