
ಬೆಂಗಳೂರು : ಮಾಜಿ ರಾಜ್ಯಪಾಲರಾದ ಮಾರ್ಗರೇಟ್ ಆಳ್ವ ಅವರಿಗೆ ಸರ್ಪ ಗಳ ಕಾಟ ಶುರುವಾಗಿದೆ. ಈ ಸಂಬಂಧ ಅವರು ಉಪಮುಖ್ಯಮಂತ್ರಿ ಹಾಗೂ ಬೆಂಗಳೂರು ನಗರಾಭಿವೃದ್ಧಿ ಸಚಿವರಾದ ಡಾ.ಜಿ ಪರಮೇಶ್ವರ್ ಬಳಿ ತಮ್ಮ ಅಳಲನ್ನು ತೋಡಿಕೊಂಡಿದ್ದಾರೆ.
ಕಳೆದ ತಿಂಗಳಷ್ಟೇ ಮಾರ್ಗರೇಟ್ ಆಳ್ವಾ ಪತಿ ನಿಧನರಾಗಿದ್ದು, ಈ ನಿಟ್ಟಿನಲ್ಲಿ ಸಾಂತ್ವನ ಹೇಳಲು ಡಾ. ಜಿ ಪರಮೇಶ್ವರ್ ಅವರು ಅವರ ನಿವಾಸಕ್ಕೆ ತೆರಳಿದ್ದರು.
ಪ್ರತಿಷ್ಟಿತ ವ್ಯಕ್ತಿಗಳು ವಾಸವಾಗಿರುವ ಆರ್ ಎಂ ವಿ ಬಡಾವಣೆಯಲ್ಲಿ ಇರುವ ಮಾರ್ಗರೇಟ್ ಆಳ್ವಾ ನಿವಾಸಕ್ಕೆ ತೆರಳಿದ್ದ ವೇಳೆ ಅವರು ತಮ್ಮ ಸಮಸ್ಯೆ ಹೇಳಿಕೊಂಡಿದ್ದಾರೆ. ಸರ್ಪಗಳು ಇಲ್ಲಿ ಹೆಚ್ಚು ಕಾಣಿಸಿಕೊಳ್ಳುತ್ತಿರುವುದಾಗಿ ಅವರು ಹೇಳಿಕೊಂಡಿದ್ದಾರೆ.
ಇಂತಹಾ ಸ್ಥಳದಲ್ಲಿಯೇ ಹೀಗಾದರೆ ಗತಿ ಏನು ಎಂದು ಮಾಜಿ ರಾಜ್ಯಪಾಲೆ ತಮ್ಮ ಅಳಲನ್ನು ತೋಡಿಕೊಂಡಿದ್ದು, ಈ ಸಂಬಂಧ ಕ್ರಮ ಕೈಗೊಳ್ಳುವುದಾಗಿ ಪರಮೇಶ್ವರ್ ಭರವಸೆ ನೀಡಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.