
ಬೆಂಗಳೂರು (ಅ.03): ಮಾಜಿ ಡಿವೈಎಸ್ ಪಿ ಅನುಪಮಾ ಶೆಣೈ ಪಾಲಿಟಿಕ್ಸ್ಗೆ ಎಂಟ್ರಿ ಆಗೋದು ಖಚಿತವಾಗಿದೆ. ಈ ಬಗ್ಗೆ ಸುವರ್ಣ ನ್ಯೂಸ್ ಜೊತೆ ಅನುಪಮಾ ತಮ್ಮ ಮನದಾಳ ಹಂಚಿಕೊಂಡಿದ್ದಾರೆ. ಹೊಸ ಪಕ್ಷ ಆರಂಭಿಸಲು ಅನುಪಮಾ ಶೆಣೈ ಸಮಾನ ಮನಸ್ಕರೊಂದಿಗೆ ಮಾತುಕತೆ ನಡೆಸಿದ್ದು, ನವೆಂಬರ್ ತಿಂಗಳಲ್ಲಿ ಹೊಸ ಪಕ್ಷ ಘೋಷಣೆ ಸಾಧ್ಯತೆ ಆಗುವ ಸಾಧ್ಯತೆ ಇದೆ.
ಮಾಜಿ ಡಿವೈಎಸ್ ಪಿ ಅನುಪಮಾ ಶೆಣೈ ರಾಜಕೀಯಕ್ಕೆ ಬರಲು ತಯಾರಿ ನಡೆಸುತ್ತಿದ್ದು, ಹೊಸ ಪಕ್ಷ ಆರಂಭಿಸಲು ಅನುಪಮಾ ಶೆಣೈ ಚಿಂತನೆ ನಡೆಸಿದ್ದಾರೆ. ಸಮಾನ ಮನಸ್ಕರೊಂದಿಗೆ ಅನುಪಮಾ ಮಾತುಕತೆ ನಡೆಸಿದ್ದು, ನವೆಂಬರ್ ತಿಂಗಳಲ್ಲಿ ಹೊಸ ಪಕ್ಷ ಘೋಷಣೆ ಸಾಧ್ಯತೆ ಇದೆ. ರಾಜ್ಯಾದ್ಯಂತ ಚರ್ಚಿಸಿ ಸೂಕ್ತ ನಿರ್ಧಾರ ತೆಗೆದುಕೊಳ್ಳುತ್ತೇನೆ ಎಂದಿದ್ದಾರೆ.
ಗಾಂಧೀಜಿಯ ಗ್ರಾಮ ಸ್ವರಾಜ್ಯ ಕನಸು ನನಸು ಮಾಡಬೇಕಿದೆ. ಮೊದಲ ಸುತ್ತಿನ ಮಾತುಕತೆ ನಡೆದಿದೆ. ಸಾರ್ವಜನಿಕರು ತಮ್ಮ ಅಭಿಪ್ರಾಯವನ್ನು ನೇರವಾಗಿ ಹಂಚಿಕೊಳ್ಳಬಹುದು. ರಾಜಕೀಯಕ್ಕೆ ಭ್ರಷ್ಟತೆ ಸಂಪೂರ್ಣ ಆವರಿಸಿಕೊಂಡಿದೆ. ಪೊಲೀಸ್ ಇಲಾಖೆ ನನಗೆ ರಾಜಕೀಯ ಪಾಠ ಕಲಿಸಿದೆ ಎಂದು ಉಡುಪಿಯ ಉಚ್ಚಿಲದಲ್ಲಿ ಅನುಪಮಾ ಶೆಣೈ ಹೇಳಿಕೆ ನೀಡಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.