ಕನ್ನಡದಲ್ಲಿ ಶಪಥ ಮಾಡಿದ್ದ ಕೇರಳ ಮಾಜಿ ಸಚಿವ ಇನ್ನಿಲ್ಲ

Published : Jul 28, 2018, 11:18 AM IST
ಕನ್ನಡದಲ್ಲಿ ಶಪಥ ಮಾಡಿದ್ದ ಕೇರಳ ಮಾಜಿ ಸಚಿವ ಇನ್ನಿಲ್ಲ

ಸಾರಾಂಶ

ಗಡಿ ಜಿಲ್ಲೆಯಿಂದ ಆಯ್ಕೆಯಾಗಿ, ನೆರೆ ರಾಜ್ಯ ಕೇರಳದಲ್ಲಿ ಕನ್ನಡದಲ್ಲಿಯೇ ಶಪಥ ಸ್ವೀಕರಿಸುವ ಮೂಲಕ ಕನ್ನಡ ಕಂಪು ಬೀರಿದ್ದು ಕೇರಳ ಮಾಜಿ ಸಚಿವ ಚೆರ್ಕಳಂ ಅಬ್ದುಲ್ಲ ಇನ್ನಿಲ್ಲ.

ಮಂಗಳೂರು: ಕೇರಳದ ಗಡಿಯಲ್ಲಿ ಕನ್ನಡದ ಕಂಪು ಬೀರಿದ, ಮಂಜೇಶ್ವರ ಕ್ಷೇತ್ರ ಅಭಿವೃದ್ಧಿಯ ರೂವಾರಿಯಾಗಿದ್ದ ಮಾಜಿ ಸಚಿವ ಚೆರ್ಕಳಂ ಅಬ್ದುಲ್ಲ(76) ಅಸೌಖ್ಯದಿಂದ ಶುಕ್ರವಾರ ತಮ್ಮ ಸ್ವಗೃಹದಲ್ಲಿ ಇಹಲೋಕ ತ್ಯಜಿಸಿದ್ದಾರೆ. 

ಮೃತರ ದಫನ ಕಾರ್ಯ ಚೆರ್ಕಳ ಜುಮಾ ಮಸೀದಿ ವಠಾರದಲ್ಲಿ ಸಂಜೆ ಸರ್ಕಾರಿ ಗೌರವಗಳೊಂದಿಗೆ ನಡೆಯಿತು. 1987 ರಿಂದ 2006ರ ತನಕ ಮಂಜೇಶ್ವರ ವಿಧಾನಸಭಾ ಕ್ಷೇತ್ರದ ಶಾಸಕರಾಗಿ, 2001 ರಿಂದ 2004 ರ ತನಕ ಕೇರಳ ರಾಜ್ಯದ ಸ್ಥಳೀಯಾಡಳಿತ ಖಾತೆ ಸಚಿವರಾಗಿದ್ದರು. 2001 ರಲ್ಲಿ ಎ.ಕೆ.ಆ್ಯಂಟನಿ ಸಚಿವ ಸಂಪುಟದಲ್ಲಿ ಸ್ಥಳೀಯಾಡಳಿತ ಖಾತೆ ಸಚಿವರಾಗಿ ಕನ್ನಡದಲ್ಲೇ ಪ್ರಮಾಣವಚನ ಸ್ವೀಕರಿಸುವ ಮೂಲಕ ಗಡಿನಾಡಿನ ಕನ್ನಡಿಗರ ಹೃದಯಸ್ಪರ್ಶಿಸಿದ್ದರು.
 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ನೆಹರೂ ಕಾಲದಲ್ಲೇ ಮೊದಲ ಮತಗಳ್ಳತನ ನಡೆದಿದ್ದು; ಎರಡು ಮತ ಪಡೆದು ಪ್ರಧಾನಿಯಾದರು' ಸಂಸತ್ತಿನಲ್ಲಿ ಕಾಂಗ್ರೆಸ್ ವಿರುದ್ಧ ಶಾ ವಾಗ್ದಾಳಿ
ತಮಿಳು ಚಿತ್ರದಲ್ಲಿ ಕನ್ನಡ ಹಾಡು ಬಳಸಿದ್ದಕ್ಕೆ ದಂಡ, ಒಟಿಟಿ ರಿಲೀಸ್‌ಗೂ ಮುನ್ನ 30 ಲಕ್ಷ ಠೇವಣಿ ಇಡಿ ಎಂದ ಕೋರ್ಟ್‌!