
ಬೆಂಗಳೂರು(ಆ.22): ಮಾಜಿ ಶಾಸಕ, ವೈಎಸ್ ವಿ ದತ್ತ ಅವರ ಪತ್ನಿ ನಿರ್ಮಲಾ ದತ್ತ ಇಂದು ಸಂಜೆ ನಿಧನರಾಗಿದ್ದಾರೆ. ಕಳೆದ ಕೆಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ನಿರ್ಮಲಾ, ಇಂದು ಸಂಜೆ ನಿಧನ ಹೊಂದಿದರು ಎಂದು ಕುಟುಂಬದ ಮೂಲಗಳು ತಿಳಿಸಿವೆ.
ನಿರ್ಮಲಾ, ಪತಿ ಮಾಜಿ ಶಾಸಕ ದತ್ತ ಹಾಗೂ ಪುತ್ರಿ ಶ್ರೀದೇವಿ ಮತ್ತು ಅಪಾರ ಬಂಧು ಬಳಗವನ್ನು ಅಗಲಿದ್ದಾರೆ. ಅನಾರೋಗ್ಯ ಪೀಡಿತರಾಗಿದ್ದ ಅವರು ಕಳೆದ ಒಂದು ವರ್ಷದಿಂದ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು.
ಬೆಂಗಳೂರಿನಲ್ಲಿ ವಾಸವಾಗಿದ್ದ ಅವರು ದತ್ತ ಅವರ ಚುನಾವಣೆ ಸಂದರ್ಭ ಕ್ಷೇತ್ರಕ್ಕೆ ಆಗಮಿಸಿ ಪ್ರಚಾರ ಕಾರ್ಯದಲ್ಲಿಯೂ ತಮ್ಮನ್ನು ತೊಡಗಿಸಿಕೊಳ್ಳುತ್ತಿದ್ದರು. ಈ ಬಾರಿಯೂ ತಮ್ಮ ಅನಾರೋಗ್ಯದ ನಡುವೆಯೂ ದತ್ತ ಅವರ ಚುನಾವಣಾ ಪ್ರಚಾರ ಕಾರ್ಯದಲ್ಲಿ ತೊಡಗಿಸಿಕೊಂಡಿದ್ದ ಅವರು ಮತದಾನ ಕೂಡ ಚಲಾಯಿಸಿದ್ದರು.
ಇನ್ನು ಮಾಜಿ ಪ್ರಧಾನಿ ಹೆಚ್.ಡಿ. ದೇವೆಗೌಡ ನಿರ್ಮಲಾ ದತ್ತ ಅವರ ಅಂತಿಮ ದರ್ಶನ ಪಡೆದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.