‘ಸರ್ಕಾರ ಉಳಿಸಲು ಹೋರಾಡಿದ ಡಿಕೆಶಿ ಪರ ಈಗ ಎಚ್‌ಡಿಕೆ ಇಲ್ಲ’

Published : Sep 15, 2019, 08:53 AM IST
‘ಸರ್ಕಾರ ಉಳಿಸಲು ಹೋರಾಡಿದ ಡಿಕೆಶಿ ಪರ ಈಗ ಎಚ್‌ಡಿಕೆ ಇಲ್ಲ’

ಸಾರಾಂಶ

ಎಚ್‌ಡಿಕೆ ಏನೆಂದು ಒಕ್ಕಲಿಗರಿಗೆ ಈಗ ಗೊತ್ತಾಗಿದೆ: ಚೆಲುವರಾಯ| ‘ಸರ್ಕಾರ ಉಳಿಸಲು ಹೋರಾಡಿದ ಡಿಕೆಶಿ ಪರ ಈಗ ಎಚ್‌ಡಿಕೆ ಇಲ್ಲ’

ಬೆಂಗಳೂರು[ಸೆ.15]: ಡಿ.ಕೆ.ಶಿವಕುಮಾರ್‌ ಬಂಧನ ಖಂಡಿಸಿ ಏರ್ಪಡಿಸಿದ್ದ ಒಕ್ಕಲಿಗರ ಪ್ರತಿಭಟನೆಯಿಂದ ಎಚ್‌.ಡಿ.ಕುಮಾರಸ್ವಾಮಿ ದೂರ ಉಳಿದಿದ್ದಾರೆ. ಕುಮಾರಸ್ವಾಮಿ ನೇತೃತ್ವದ ಮೈತ್ರಿ ಸರ್ಕಾರ ಉಳಿಸಲು ಡಿ.ಕೆ.ಶಿವಕುಮಾರ್‌ ಎಷ್ಟೆಲ್ಲಾ ಪರಿಶ್ರಮ ಪಟ್ಟಿದ್ದರು. ಈಗ ಒಕ್ಕಲಿಗ ಸಮುದಾಯ ಹಾಗೂ ಜನರಿಗೂ ಕುಮಾರಸ್ವಾಮಿ ಏನೆಂಬುದು ಗೊತ್ತಾಗಿದೆ ಎಂದು ಮಾಜಿ ಸಚಿವ ಎನ್‌. ಚೆಲುವರಾಯಸ್ವಾಮಿ ಹೇಳಿದ್ದಾರೆ.

ಕೆಪಿಸಿಸಿ ಕಚೇರಿ ಬಳಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಡಿ.ಕೆ.ಶಿವಕುಮಾರ್‌ ಪರ ಹೋರಾಟಕ್ಕೆ ಒಕ್ಕಲಿಗ ಸಮುದಾಯದಿಂದ ನಮಗೂ ಸೇರಿ ಯಾರಿಗೂ ಆಹ್ವಾನ ಇರಲಿಲ್ಲ. ಸಮುದಾಯದ ಹೋರಾಟಕ್ಕೆ ನೈತಿಕ ಬೆಂಬಲ ಕೊಡುವ ದೃಷ್ಟಿಯಿಂದ ನಾವೆಲ್ಲಾ ಹೋಗಿದ್ದೆವು. ಆದರೆ, ಕುಮಾರಸ್ವಾಮಿ ನನಗೆ ಆಹ್ವಾನವಿರಲಿಲ್ಲ ಎಂದಿದ್ದಾರೆ. ಕುಮಾರಸ್ವಾಮಿಯವರ ಸರ್ಕಾರ ಉಳಿಸಲು ಡಿ.ಕೆ. ಶಿವಕುಮಾರ್‌ ಎಷ್ಟೆಲ್ಲಾ ಪ್ರಯತ್ನ ಮಾಡಿದರು ಎಂಬುದು ಎಲ್ಲರಿಗೂ ಗೊತ್ತಿದೆ. ಕುಮಾರಸ್ವಾಮಿ ಏನು ಮಾಡಿದರೂ ಸರಿ ಎಂಬ ಭಾವನೆ ಸಮುದಾಯದಲ್ಲಿತ್ತು. ಇದೀಗ ಒಕ್ಕಲಿಗ ಸಮುದಾಯ ಏನು ಮಾಡಲಿದೆ ಎಂಬುದನ್ನು ನೋಡಬೇಕಿದೆ ಎಂದು ಹೇಳಿದರು.

ಕೆಲ ವರ್ಷಗಳಿಂದ ಜೆಡಿಎಸ್‌ನಿಂದ ಹಲವು ನಾಯಕರು ಹೊರಬಂದಿದ್ದಾರೆ. ಜೆಡಿಎಸ್‌ ಪಕ್ಷದಲ್ಲಿರುವ ಗೊಂದಲಗಳಿಂದಲೇ ನಾನು ಪಕ್ಷ ಬಿಟ್ಟೆ. ಇದೀಗ ಜಿ.ಟಿ. ದೇವೇಗೌಡ, ಗುಬ್ಬಿ ಶ್ರೀನಿವಾಸ್‌ ಸೇರಿದಂತೆ ಹಲವರು ಪಕ್ಷ ಬಿಡುತ್ತಾರೆ ಎಂಬ ಮಾತಿದೆ. ಅಲ್ಲಿನವರ ವರ್ತನೆಯಿಂದ ಪಕ್ಷ ಬಿಟ್ಟರೂ ಪಕ್ಷ ಬಿಟ್ಟವರದ್ದೇ ತಪ್ಪು ಎಂಬ ಭಾವನೆ ಇತ್ತು. ಹಳೆ ಮೈಸೂರು ಭಾಗದಲ್ಲಿ ಜನರು ಕುಮಾರಸ್ವಾಮಿ ಅವರಿಗೆ ಆ ಶಕ್ತಿ ಕೊಟ್ಟಿದ್ದರು. ಈಗ ಜನರಿಗೂ ಮನವರಿಕೆಯಾಗಿದೆ. ಈಗಲಾದರೂ ಆ ಭಾವನೆ ಬದಲಾಗುತ್ತದೆಯೇ ಎಂಬುದನ್ನು ಕಾದು ನೋಡುತ್ತಿದ್ದೇವೆ ಎಂದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ರಿಲಯನ್ಸ್‌ ಪವರ್‌, 10 ಮಂದಿ ವಿರುದ್ಧ ಇ.ಡಿ.ಚಾರ್ಜ್‌ಶೀಟ್‌
ನಮ್ಮ ಹಣ ನಮಗೆ ಬೇಕಾದವರಿಗೆ ನೀಡುತ್ತೇವೆ: ನ್ಯಾಷನಲ್ ಹೆರಾಲ್ಡ್ ಕೇಸಲ್ಲಿ ಸಮನ್ಸ್‌ಗೆ ಡಿಕೆಶಿ ಆಕ್ರೋಶ