ಮಾಜಿ ಸಚಿವ ರಮಾನಾಥ್ ರೈಗೆ ಅಧ್ಯಕ್ಷ ಹುದ್ದೆ?

Published : Jun 01, 2018, 12:31 PM IST
ಮಾಜಿ ಸಚಿವ ರಮಾನಾಥ್ ರೈಗೆ ಅಧ್ಯಕ್ಷ ಹುದ್ದೆ?

ಸಾರಾಂಶ

ಹಿಂದಿನ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರಕಾರದಲ್ಲಿ ಸಚಿವರು ಅನೇಕರು ಸೋತಿದ್ದಾರೆ. ಆದರೆ, ಮತ್ತೆ ಬೇರೆ ಬೇರೆ ರೀತಿಯಲ್ಲಿ ಒಂದಲ್ಲ ಒಂದು ಅಧಿಕಾರ ಹಿಡಿಯಲು ಸಕಲ ರೀತಿಯಲ್ಲಿಯೂ ಯತ್ನಿಸುತ್ತಿದ್ದಾರೆ. ಮಾಜಿ ಸಚಿವ ರಮಾನಾಥ್ ರೈ ಸಹ ಅಧ್ಯಕ್ಷ ಸ್ಥಾನದ ಆಕಾಂಕ್ಷಿಯಾಗಿದ್ದು, ಎಲ್ಲಿಯ ಅಧ್ಯಕ್ಷ ಸ್ಥಾನ, ಎಂಬುವುದನ್ನು ಓದಿ.....

ಮಂಗಳೂರು: ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಸಿದ್ದರಾಮಯ್ಯ ನೇತೃತ್ವದ ಅನೇಕ ಸಚಿವರು ಸೋತು, ಇದೀಗ ಮನೆಯಲ್ಲಿದ್ದಾರೆ. ಅವರಲ್ಲಿ ಅನೇಕರು ಮುಂದಿನ ವರ್ಷ ನಡೆಯುವ ಲೋಕಸಭೆ ಚುನಾವಣೆಗೆ ಈಗಲೇ ಲಾಬಿ ನಡೆಸಲು ಆರಂಭಿಸಿದ್ದಾರೆ. ಮತ್ತೆ ಕೆಲವರು ಈ ತಿಂಗಳು ನಡೆಯುವ ವಿಧಾನ ಪರಿಷತ್ ಸದಸ್ಯ ಸ್ಥಾನಗಳಿಗೂ ಯತ್ನಿಸಿ, ಸೋತಿಸಿದ್ದಾರೆ. 

ವಿಧಾನ ಪರಿಷತ್ ಸ್ಥಾನಕ್ಕೆ ಯತ್ನಿಸಿದ ಮಾಜಿ ಸಚಿವ ರಮಾನಾಥ್ ರೈ ಅವರಿಗೆ ವರಿಷ್ಠರು ಮಣೆ ಹಾಕಲೇ ಇಲ್ಲ. ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾಗಿದ್ದ ಹರೀಶ್ ಕುಮಾರ್ ಅವರಿಗೆ ಎಂಎಲ್‌ಸಿ ಟಿಕೆಟ್ ಸಿಕ್ಕಿದೆ. ತೆರವಾಗಿರುವ ಸ್ಥಾನಕ್ಕೆ ರೈ ಆಯ್ಕೆಯಾಗುವ ಸಾಧ್ಯತೆ ಇದೆ.

ಬಂಟ್ವಾಳ ವಿಧಾನಸಭಾ ಕ್ಷೇತ್ರದಲ್ಲಿ ಸೋತಿರುವ ರಮಾನಾಥ್ ರೈ ಅವರು ಮುಂದಿನ ಲೋಕಸಭೆ ಚುನಾವಣೆಯಲ್ಲಿ ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಟಿಕೆಟ್ ಆಕಾಂಕ್ಷಿಯೂ ಹೌದು.
 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಬೆಂಗಳೂರು ಹೋಟೆಲ್‌ನಲ್ಲಿ ಭರ್ಜರಿ ಪಾರ್ಟಿ, ಪೊಲೀಸ್ ಬಂದಾಕ್ಷಣ ಬಾಲ್ಕನಿಯಿಂದ ಜಿಗಿದ ಯುವತಿ!
ಬಿಟೆಕ್ ಪದವಿ ಪೂರ್ಣಗೊಳಿಸದ ವಿದ್ಯಾರ್ಥಿಗಳಿಗೆ ಬಿಎಸ್‌ಸಿ ಪದವಿ ಕೊಡಲಿದೆ ಐಐಟಿ ಮದ್ರಾಸ್‌!