
ಬೆಳಗಾವಿ (ಜು. 20): ಶಾಸಕ ಸತೀಶ್ ಜಾರಕಿಹೊಳಿ ಕೈಯಲ್ಲಿ ಯಾವಾಗಲೂ ನಿಂಬೆಹಣ್ಣು ಇಟ್ಟುಕೊಂಡು ತಿರುಗಾಡುತ್ತಿದ್ದಾರೆ.
ಸಭೆ ಸಮಾರಂಭದಲ್ಲಿ, ಹಾಗೂ ಸಾರ್ವಜನಿಕರ ಭೇಟಿ ವೇಳೆ ಇವರ ಕೈಯಲ್ಲಿ ನಿಂಬೆಹಣ್ಣು ಇರುತ್ತೆ. ಕೈಯಲ್ಲಿ ನಿಂಬೆಹಣ್ಣು ನೋಡಿ ಸತೀಶ್ ಜಾರಕೀಹೊಳಿ ಅಭಿಮಾನಿಗಳು ತಬ್ಬಿಬ್ಬಾಗಿದ್ದಾರೆ.
ಕಳೆದು ಅಮವಾಸ್ಯೆಯಿಂದ ಕೈಯಲ್ಲಿ ನಿಂಬೆಹಣ್ಣು ಹಿಡಿದುಕೊಂಡು ಓಡಾಡುತ್ತಿದ್ದಾರೆ. ನಿನ್ನೆ ಬೆಳಗಾವಿಯಲ್ಲಿ ನಡೆದ ಜಿಲ್ಲಾ ಪಂಚಾಯತ್ ಸಮಾರಂಭದಲ್ಲೂ ಸಾರ್ವಜನಿಕ ಭೇಟಿ ವೇಳೆ ಕೈಯಲ್ಲಿ ನಿಂಬೆಹಣ್ಣು ಹಿಡಿದುಕೊಂಡಿದ್ದರು.
ಪ್ರತಿ ವರ್ಷ ಡಿಸೆಂಬರ್ 6 ರಂದು ಮೂಢನಂಬಿಕೆ ವಿರೋಧಿಸಿ ಸ್ಮಶಾನದಲ್ಲಿ ಕಾರ್ಯಕ್ರಮ ಹಮ್ಮಿಕೊಳ್ಳುವ ಸತೀಶ್ ಜಾರಕಿಹೊಳಿ ಸ್ವತಃ ಅವರೇ ಮೂಢನಂಬಿಕೆಯನ್ನು ಆಚರಿಸುತ್ತಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.