
ಮೈಸೂರು (ಡಿ.27): ರಾಜ್ಯದಲ್ಲಿ ದಲಿತನೊಬ್ಬ ಮುಖ್ಯಮಂತ್ರಿ ಆಗುವುದನ್ನು ಸಿಎಂ ಸಿದ್ದರಾಮಯ್ಯ ವ್ಯವಸ್ಥಿತವಾಗಿ ತಡೆದಿದ್ದಾರೆ ಎಂದು ಮಾಜಿ ಸಚಿವ ವಿ.ಶ್ರೀನಿವಾಸ್ ಪ್ರಸಾದ್ ಗಂಭೀರ ಆರೋಪ ಮಾಡಿದ್ದಾರೆ.
ಮೈಸೂರಿನಲ್ಲಿ ಸುದ್ದಿಗೋಷ್ಟಿ ನಡೆಸಿದ ಅವರು, ಒಬ್ಬರನ್ನು ಕೇಂದ್ರಕ್ಕೆ ಕಳುಹಿಸಿ 45 ಜನರನ್ನು ನಾಯಕರನ್ನಾಗಿ ಮಾಡಲಾಗಿದೆ. ಪರಮೇಶ್ವರ್ ಸೋಲಿಸಿ ಮೂಗ-ಕಿವುಡನನ್ನು ಶಾಲೆಗೆ ಮುಖ್ಯೋಪಾಧ್ಯಾಯರನ್ನಾಗಿ ಮಾಡಲಾಗಿದೆ. ನನ್ನನ್ನು ಕೂಡ ಇದೇ ರೀತಿ ಮುಗಿಸಿದ್ದಾರೆ ಎಂದು ಸಿದ್ದರಾಮಯ್ಯ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
ನನ್ನ ಸುದೀರ್ಘ ರಾಜಕೀಯ ಜೀವನದಲ್ಲಿ ಎಚ್ಚರಿಕೆಯಿಂದ ಹೆಜ್ಜೆ ಇಟ್ಟಿದ್ದೇನೆ. ಜನರಿಗೆ ಗೌರವ ತಂದುಕೊಡುವ, ಹಗರಣ ಮುಕ್ತವಾಗಿ ರಾಜಕೀಯ ಮಾಡಿದ್ದೇನೆ. ಗೌರವಯುತ ನಿವೃತ್ತಿ ಬಯಸಿದ್ದೆ. ಆದರೆ ಸಿಎಂ ಸಿದ್ದರಾಮಯ್ಯ ಮಾಸದ ಗಾಯ ಮಾಡಿಬಿಟ್ಟರು. ಅವರನ್ನು ಕಷ್ಟ ಕಾಲದಲ್ಲಿ ಕೈಹಿಡಿದು ಧೈರ್ಯ ತುಂಬಿದವನು ನಾನು. ಆದರೆ ಉದ್ದೇಶಪೂರ್ವಕವಾಗಿಯೇ ನನ್ನನ್ನು ಸಂಪುಟದಿಂದ ಕೈಬಿಟ್ಟರು ಎಂದು ಗುಡುಗಿದರು.
ಸಿದ್ದರಾಮಯ್ಯ ದಲಿತರ ಚಿಂತನೆಗಳ ಬಗ್ಗೆ ಉದ್ದುದ್ದ ಮಾತನಾಡುತ್ತಾರೆ. ಆದರೆ ಅದನ್ನು ಕಾರ್ಯಗತ ಮಾಡುವುದಿಲ್ಲವೆಂದು ವಿ.ಶ್ರೀನಿವಾಸಪ್ರಸಾದ್ ಹೇಳಿದ್ದಾರೆ. ಸಿದ್ದರಾಮಯ್ಯ ಬುದ್ಧ , ಬಸವ, ಅಂಬೇಡ್ಕರ್ ತತ್ವಗಳನ್ನ ಕೇವಲ ಸಮಾವೇಶದಲ್ಲಿ ಮಾತ್ರ ನೆನಪು ಮಾಡಿಕೊಳ್ಳುತ್ತಾರೆ. ಅದನ್ನ ಕಾರ್ಯಗತ ಮಾಡಲು ಅಥವಾ ಪಾಲನೆ ಮಾಡಲು ಅಲ್ಲಾ ಎಂದು ಶ್ರೀನಿವಾಸಪ್ರಸಾದ್ ಹೇಳಿದ್ದಾರೆ.
ಸಚಿವ ಸಂಪುಟದಿಂದ ಕೈಬಿಟ್ಟ ಹಿನ್ನೆಲೆಯಲ್ಲಿ ವಿ.ಶ್ರೀನಿವಾಸಪ್ರಸಾದ್ ಕಾಂಗ್ರೆಸ್ ಪಕ್ಷವನ್ನು ತೊರೆದಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.