
ಬೆಂಗಳೂರು[ಸೆ.12] ಸರ್ .ಎಂ.ವಿಶ್ವೇಶರಯ್ಯ ಅವರ ಜನ್ಮದಿನವನ್ನು ಇಂಜಿನಿಯರ್ಸ್ ಡೇ ಆಗಿ ಆಚರಣೆ ಮಾಡಿಕೊಂಡು ಬರಲಾಗುತ್ತಿದೆ. ನಗರದ ಅಂಬೇಡ್ಕರ್ ವೀದಿಯ ದಿ ಇನ್ಸ್ಟಿಟ್ಯೂಷನ್ ಆಫ್ ಇಂಜಿನಿಯರ್ಸ್ ಆವರಣದಲ್ಲಿ ಸೆ.15 ರಂದು ಸಂಜೆ 5.30ಕ್ಕೆ ಇಂಜಿನಿಯರ್ಸ್ ದಿನಾಚರಣೆ ಹಮ್ಮಿಕೊಳ್ಳಲಾಗಿದೆ.
ರಾಜ್ಯ ಸರಕಾರದ ಮುಖ್ಯ ಕಾರ್ಯದರ್ಶಿ ಟಿ.ಎಂ.ವಿಜಯ್ ಭಾಸ್ಕರ್, ಮಾಜಿ ಸಂಸದ ಜನಾರ್ಧನ ಸ್ವಾಮಿ ಕಾರ್ಯಕ್ರಮದಲ್ಲಿ ಭಾಗವಹಿಸಿ ಡಿಜಿಟಲ್ ಕ್ರಾಂತಿಯ ಇಂದಿನ ಅಗತ್ಯಗಳ ಬಗ್ಗೆ ಮಾತನಾಡಲಿದ್ದಾರೆ. ಕೈಗಾರಿಕೆ ಬೆಳವಣಿಗೆಯಲ್ಲಿ ನವೀನ ತಂತ್ರಜ್ಞಾವನ್ನು ಹೇಗೆ ಬಳಕೆ ಮಾಡಿಕೊಳ್ಳಬಹುದು ಎಂಬುದನ್ನು ವಿವರಿಸಲಿದ್ದಾರೆ.
ಯುಬಿಡಿಟಿ ಕಾಲೇಜಿನಿಂದ ಇಂಜಿನಿಯರಿಂಗ್ ಪದವಿ ಪಡೆದುಕೊಂಡಿದ್ದ ಜನಾರ್ಧನ ಸ್ವಾಮಿ ಎಲೆಕ್ಟ್ರಿಕಲ್ ಕಮ್ಯೂನಿಕೇಶನ್ ವಿಭಾಗದಲ್ಲಿ ಇಂಡಿಯನ್ ಇನ್ಸ್ಟಿಟ್ಯೂಟ್ ಆಫ್ ಸೈನ್ಸ್ ನಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ.
ಚೀನಾ, ತೈವಾನ್ ಮತ್ತು ಅಮೆರಿಕದ ಸಿಲಿಕಾನ್ ವ್ಯಾಲಿಯಲ್ಲಿಯೂ ಕೆಲಸ ಮಾಡಿದ್ದ ಸ್ವಾಮಿ ನಂತರ ಭಾರತಕ್ಕೆ ಹಿಂದಿರುಗಿ ಬಿಜೆಪಿಯ ಐಟಿ ಸೆಲ್ ನಲ್ಲಿ ಕೆಲಸ ಮಾಡಿ ಚಿತ್ರದುರ್ಗದಿಂದ ಲೋಕಸಭೆಗೆ ಸ್ಪರ್ಧಿಸಿ ಜಯಗಳಿಸಿದ್ದರು.
ಸಾಧಕ ಇಂಜಿನಿಯರ್ಗಳಾದ ಜಲಮಂಡಳಿಯ ಪಿ ಎನ್ ರವೀಂದ್ರ. ಎಚ್ಎಎಲ್ ನ ಟಿ.ಆರ್.ರಾಜಣ್ಣ, ದಾವಣಗೆರೆಯ ರೇವಣಸಿದ್ದಪ್ಪ, ಹಾಸನದ ಡಾ,ರಮೇಶ್ ಮತ್ತು ಎಫ್ ಐ ಇಯ ಅಧ್ಯಕ್ಷ ಎನ್.ಚಿಕ್ಕಣ್ಣ ಅವರನ್ನು ಸನ್ಮಾನಿಸಲಾಗುವುದು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.