ಕರ್ನಾಟಕದೊಂದಿಗೆ ಸುಷ್ಮಾ ನಂಟು..ಒಂದೊಂದು ಪುಟಗಳು ರೋಚಕ

Published : Aug 06, 2019, 11:59 PM ISTUpdated : Aug 07, 2019, 12:07 AM IST
ಕರ್ನಾಟಕದೊಂದಿಗೆ ಸುಷ್ಮಾ ನಂಟು..ಒಂದೊಂದು ಪುಟಗಳು ರೋಚಕ

ಸಾರಾಂಶ

ಮಾಜಿ ವಿದೇಶಾಂಗ ಸಚಿವೆ, ಬಿಜೆಪಿ ಹಿರಿಯ ನಾಯಕಿ ಸುಷ್ಮಾ ಸ್ವರಾಜ್  ನಿಧನರಾಗಿದ್ದಾರೆ. ಇಡೀ ದೇಶವೇ ಸ್ವರಾಜ್ ಅವರ ನಿಧನಕ್ಕೆ ಕಂಬನಿ ಮಿಡಿಯುತ್ತಿದೆ. ಸುಷ್ಮಾ ರಾಷ್ಟ್ರ ಮಟ್ಟದ ನಾಯಕಿಯಾಗಿದ್ದರೂ ಕರ್ನಾಟಕದ ಜತೆ ಅವಿನಾಭಾವ ಸಂಬಂಧ ಹೊಂದಿದ್ದರು.

ಬೆಂಗಳೂರು[ಆ. 06] ಬಿಜೆಪಿ ಹಿರಿಯ ನಾಯಕಿ ಸುಷ್ಮಾ ಕರ್ನಾಟಕದ ಜತೆ ಮೊದಲಿನಿಂದಲೂ ನಿಕಟ ಸಂಬಂಧ ಇರಿಸಿಕೊಂಡು ಬಂದವರು. ಅದರಲ್ಲಿಯೂ ವಿಶೇಷವಾಗಿ ಬಳ್ಳಾರಿಯೊಂದಿಗಿನ ಅವರ ನಂಟನ್ನು ನೆನಪಿಸಿಕೊಳ್ಳಲೇಬೇಕು. ಅವರು ಕನ್ನಡ ಕಲಿತು ಮಾತನಾಡಿದ್ದು ಸಹ ಅಷ್ಟೇ ರೋಚಕ.

ಕರ್ನಾಟಕದ ಜೊತೆ ಉತ್ತಮ ನಂಟು ಹೊಂದಿದ್ದ ಸುಷ್ಮಾ ಸ್ವರಾಜ್​ 1999ರಲ್ಲಿ ಬಳ್ಳಾರಿಯಲ್ಲಿ ಲೋಕಸಭಾ ಕ್ಷೇತ್ರದಿಂದ ಸ್ಪರ್ಧೆ ಮಾಡಿದ್ದರು. ಸೋನಿಯಾ ಗಾಂಧಿ ವಿರುದ್ಧ ಸ್ಪರ್ಧೆ ಮಾಡಿದ್ದ ಸುಷ್ಮಾ ಸ್ವರಾಜ್​ ಪರಾಭವಗೊಂಡಿದ್ದರೂ ಕರ್ನಾಟಕದ ಪ್ರೀತಿ ಸಂಪಾದಿಸಿದ್ದರು.ಲೋಕ ಸಮರದ ವೇಳೆ ಸುಷ್ಮಾಮಾಡಿದ್ದ ಕನ್ನಡದ ಭಾಷಣ ಎಂದಿಗೂ ಮರೆಯುವ ಹಾಗಿಲ್ಲ.

ಈ ದಿನಕ್ಕಾಗಿ ಕಾಯುತ್ತಿದ್ದೆ; ಸುಷ್ಮಾ ಧನ್ಯವಾದದ ಕೊನೆಯ ಟ್ವೀಟ್!

ಬಿಜೆಪಿ ನಾಯಕರಾಗಿದ್ದ  ಜನಾರ್ದನ ರೆಡ್ಡಿ  ಮತ್ತು ಶ್ರೀರಾಮುಲು ಜೊತೆ ಉತ್ತಮ ಭಾಂಧವ್ಯ ಹೊಂದಿದ್ದರು. ಸುಷ್ಮಾ ಸ್ವರಾಜ್​ಅವರನ್ನು ತಾಯಿ ಎಂದೇ ರೆಡ್ಡಿ ಸಹೋದರರು ಗೌರವಿಸುತ್ತಿದ್ದರು. 

ಪ್ರತಿ ವರ್ಷ ವರಮಹಾಲಕ್ಷ್ಮೀ ಹಬ್ಬಕ್ಕೆ ಬಳ್ಳಾರಿಗೆ ಆಗಮಿಸುತ್ತಿದ್ದ ಸುಷ್ಮಾ ವಿವಿಧ ಕಾರ್ಯಕ್ರಮದಲ್ಲಿ ಭಾಗಿಯಾಗುತ್ತಿದ್ದರು.  ಜನಾರ್ದನ ರೆಡ್ಡಿ ನಡೆಸುತ್ತಿದ್ದ ಸಾಮೂಹಿಕ ವಿವಾಹದಲ್ಲಿ ಭಾಗಿಯಾಗುತ್ತಿದ್ದರು. ಡಾ.ಬಿ.ಕೆ ಸುಂದರ್  ಅವರ ಮನೆಯ ‌ಪೂಜೆಗಳಲ್ಲಿ ಸಹ ಸುಷ್ಮಾ ಕಾಣಿಸಿಕೊಳ್ಳುತ್ತಿದ್ದರು.

ಸುಷ್ಮಾ ಸ್ವರಾಜ್ ಜೀವನ-ಪರಂಪರೆ

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಭೂಕಂಪದ ಬೆನ್ನಲ್ಲೇ ಜಪಾನ್‌ನಲ್ಲಿ ಸುನಾಮಿ ಎಚ್ಚರಿಕೆ, ಭಾರತದ ಕರಾವಳಿ ಪ್ರದೇಶಕ್ಕಿದೆಯಾ ಆತಂಕ?
Suvarna Special: ಮಮತಾ ಬತ್ತಳಿಕೆ ಹೊಸ ಅಸ್ತ್ರ ಯಾವುದು ? ಮೋದಿ ವಿರುದ್ಧ ಹಿಂದೂ ಅಸ್ತ್ರ ಹಿಡಿದ ದೀದಿ..!