ಮಾಜಿ ಪ್ರಧಾನಿ ದೇವೇಗೌಡರಿಗೆ ಒಲಿದು ಬಂತು ಪ್ರತಿಷ್ಠಿತ ಪ್ರಶಸ್ತಿ

Published : Oct 23, 2018, 11:35 AM ISTUpdated : Oct 23, 2018, 12:09 PM IST
ಮಾಜಿ ಪ್ರಧಾನಿ ದೇವೇಗೌಡರಿಗೆ ಒಲಿದು ಬಂತು ಪ್ರತಿಷ್ಠಿತ ಪ್ರಶಸ್ತಿ

ಸಾರಾಂಶ

ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡ ಅವರು ವಾಲ್ಮೀಕಿ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ. ತಂದೆಗೆ ಮಗನಿಂದಲೇ ಪ್ರಶಸ್ತಿ ಪ್ರದಾನ.

ಬೆಂಗಳೂರು, [ಅ.23]: ರಾಜ್ಯ ಸರ್ಕಾರದ ಪ್ರತಿಷ್ಠಿತ ಶ್ರೀ ಮಹರ್ಷಿ ವಾಲ್ಮೀಕಿ ಪ್ರಶಸ್ತಿಗೆ ಮಾಜಿ ಪ್ರಧಾನಿ ಎಚ್‌ಡಿ ದೇವೇಗೌಡರನ್ನು ಆಯ್ಕೆ ಮಾಡಿದೆ.

ವಾಲ್ಮೀಕಿ ಪ್ರಶಸ್ತಿ ಆಯ್ಜೆಗೆ ರಾಜ್ಯ ಉಚ್ಛ ನ್ಯಾಯಾಲಯದ ನಿವೃತ್ತ ನ್ಯಾಯಾಧೀಶರಾದ ನ್ಯಾಯಮೂರ್ತಿ ಎಚ್.ಎನ್.ನಾಗಮೋಹನ ದಾಸ್ ಅವರ ಅಧ್ಯಕ್ಷತೆಯಲ್ಲಿ ರಾಜ್ಯ ಸರ್ಕಾರ ಸಮತಿ ನೇಮಿಸಿತ್ತು.

ವಾಲ್ಮೀಕಿ ಪ್ರಶಸ್ತಿ ಆಯ್ಕೆ ಸಮಿತಿ ಶಿಫಾರಿಸಿನಂತೆ ರಾಜ್ಯ ಸರ್ಕಾರ ಈ ಪ್ರಶಸ್ತಿಯನ್ನು ಎಚ್​ಡಿಡಿ ಅವರಿಗೆ ನೀಡಿ ಗೌರವಿಸಲು ಮುಂದಾಗಿದೆ. ಸಮಾಜ ಕಲ್ಯಾಣ ಸಚಿವ ಪ್ರಿಯಾಂಕ್ ಖರ್ಗೆ ಇಂದು ಎಚ್​ಡಿಡಿ ಅವರನ್ನು ಪದ್ಮನಾಭನಗರದ ನಿವಾಸದಲ್ಲಿ ಭೇಟಿ ಮಾಡಿ ಪ್ರಶಸ್ತಿ ಪ್ರದಾನ ಸಮಾರಂಭಕ್ಕೆ ಆಹ್ವಾನಿಸಿರು. 

ನಾಳೆ [ಬುಧವಾರ] ವಿಧಾನಸೌಧದ ಬ್ಯಾಂಕ್ವೆಟ್ ಸಭಾಂಗಣದಲ್ಲಿ ಪ್ರಶಸ್ತಿ ಪ್ರದಾನ ಸಮಾರಂಭ ನಡೆಯಲಿದ್ದು, ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ತಮ್ಮ ತಂದೆಗೆ ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ. 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಜ್ಯೂಸ್‌ಗೆ ಡ್ರಗ್‌ ಮಿಕ್ಸ್‌ ಮಾಡಿ ಹಲವು ಅಪ್ರಾಪ್ತರ ಮೇಲೆ ಮಧ್ಯವಯಸ್ಕನಿಂದ ರೇ*ಪ್: ವೀಡಿಯೋ ಮಾಡಿ ಬ್ಲಾಕ್‌ಮೇಲ್
ಕೋಳಿಗೆ ಚೀಪ್ ಆಗಿ ಮೊಟ್ಟೆ ಇಡು ಅನ್ನೋಕಾಗುತ್ತಾ?' BJP MLA ಪ್ರಶ್ನೆಗೆ ಶಿಕ್ಷಣ ಸಚಿವರ ಉತ್ತರ