
ಚಿತ್ರದುರ್ಗ(ಅ.24): ಮಾಜಿ ಪ್ರಧಾನಿ ಜೆಡಿಎಸ್ ರಾಷ್ಟ್ರಾಧ್ಯಕ್ಷ ಎಚ್.ಡಿ. ದೇವೇಗೌಡರನ್ನು ರಾಜ್ಯ ಸರ್ಕಾರ ವಾಲ್ಮೀಕಿ ಪ್ರಶಸ್ತಿಗೆ ಆಯ್ಕೆ ಮಾಡಿರುವುದಕ್ಕೆ ಚಿತ್ರದುರ್ಗದ ನಾಯಕ ಸಮಾಜ ಅಭಿನಂದನೆ ಸಲ್ಲಿಸಿದೆ.
ನಾಯಕ ಸಮಾಜದ ಜಿಲ್ಲಾಧ್ಯಕ್ಷ ಎಚ್.ಜೆ. ಕೃಷ್ಣಮೂರ್ತಿ, ತಾಲೂಕು ಅಧ್ಯಕ್ಷ ಬಿ. ಕಾಂತರಾಜ್, ಚಿತ್ರದುರ್ಗ ನಾಯಕ ಸಮಾಜದ ಕಾರ್ಯದರ್ಶಿ ಡಿ. ಗೋಪಾಲಸ್ವಾಮಿ ನಾಯಕ, ನಗರಸಭೆ ಸದಸ್ಯ ದೀಪಕ್, ಮಾಜಿ ಸದಸ್ಯರಾದ ಸಿ.ಟಿ. ರಾಜೇಶ್, ತಿಪ್ಪೇಸ್ವಾಮಿ, ನಾಯಕ ಸಮಾಜದ ಮುಖಂಡರಾದ ಗುರುಸಿದ್ದಪ್ಪ ರಾಜ್ಯ ಸರ್ಕಾರಕ್ಕೆ ನಿರ್ಧಾರವನ್ನ ಅಭಿನಂದಿಸಿದ್ದಾರೆ.
ಅನೇಕ ಉಪಜಾತಿಗಳನ್ನು ಪರಿಶಿಷ್ಟಪಂಗಡಕ್ಕೆ ಸೇರಿಸಿದ ಕೀರ್ತಿ ಎಚ್.ಡಿ. ದೇವೇಗೌಡರಿಗೆ ಸಲ್ಲಬೇಕು. ಪರಿಶಿಷ್ಟವರ್ಗಗಳ ಕಲ್ಯಾಣ ಇಲಾಖೆ ಸ್ಥಾಪಿಸಿದ ಅವರು ವಾಲ್ಮೀಕಿ ನಾಯಕ ಜನಾಂಗದ ಮಠಕ್ಕೆ ಮೊಟ್ಟಮೊದಲು ಜಾಗ ನೀಡಿ ನಾಯಕ ಸಮಾಜಕ್ಕೆ ಸಾಮಾಜಿಕ ನ್ಯಾಯ ದೊರಕಿಸುವಲ್ಲಿ ಶ್ರಮಿಸಿದ ದೇವೇಗೌಡರಿಗೆ ವಾಲ್ಮೀಕಿ ಪ್ರಶಸ್ತಿಯನ್ನು ನೀಡಿ ರಾಜ್ಯ ಸರ್ಕಾರ ಗೌರವಿಸುತ್ತಿರುವುದು ನಿಜಕ್ಕೂ ಅರ್ಥಪೂರ್ಣ ಎಂದು ನಾಯಕ ಸಮಾಜದ ಮುಖಂಡರು ಹರ್ಷ ವ್ಯಕ್ತಪಡಿಸಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.