ಡಾ. ಸಿಂಗ್ ಪ್ರಮಾಣವಚನ: ರಾಜ್ಯಸಭೆಗೆ ಬೇಕಿದೆ ಇವರ ಆಶೀರ್ವಚನ!

Published : Aug 23, 2019, 04:44 PM IST
ಡಾ. ಸಿಂಗ್ ಪ್ರಮಾಣವಚನ: ರಾಜ್ಯಸಭೆಗೆ ಬೇಕಿದೆ ಇವರ ಆಶೀರ್ವಚನ!

ಸಾರಾಂಶ

ರಾಜ್ಯಸಭೆ ಸದಸ್ಯರಾಗಿ ಡಾ. ಮನೋಮಹನ್ ಸಿಂಗ್ ಪ್ರಮಾಣವಚನ| ರಾಜಸ್ಥಾನದಿಂದ ರಾಜ್ಯಸಭೆಗೆ ಆಯ್ಕೆಯಾದ ಡಾ. ಸಿಂಗ್| ಸಭಾಪತಿ ಎಂ. ವೆಂಕಯ್ಯನಾಯ್ಡು ತಮ್ಮ ಕೊಠಡಿಯಲ್ಲಿ ಸಿಂಗ್ ಅವರಿಗೆ ಪ್ರಮಾಣವಚನ| ರಾಜಸ್ತಾನದಿಂದ ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆಯಾಗಿರುವ ಡಾ. ಸಿಂಗ್|

ನವದೆಹಲಿ(ಆ.23): ರಾಜ್ಯಸಭೆಗೆ ಯಾವ ರಾಜ್ಯದಿಂದ ಸ್ಪರ್ಧಿಸುವುದು ಎಂಬ ಗೊಂದಲದಲ್ಲಿದ್ದ ಮಾಜಿ ಪ್ರಧಾನಿ ಡಾ. ಮನಮೋಹನ್ ಸಿಂಗ್, ಕೊನೆಗೂ ರಾಜಸ್ಥಾನದಿಂದ ರಾಜ್ಯಸಭೆಗೆ ಆಯ್ಕೆಯಾಗಿದ್ದಾರೆ.

ಇಂದು ರಾಜ್ಯಸಭಾ ಸಭಾಪತಿ ಎಂ. ವೆಂಕಯ್ಯನಾಯ್ಡು ತಮ್ಮ ಕೊಠಡಿಯಲ್ಲಿ ಮನಮೋಹನ್ ಸಿಂಗ್ ಅವರಿಗೆ ಪ್ರಮಾಣ ವಚನ ಬೋಧಿಸಿದರು. 

ನಾಯ್ಡು ಕೊಠಡಿಯಲ್ಲಿ ಸರಳವಾಗಿ ನಡೆದ ಪ್ರಮಾಣವಚನ ಕಾರ್ಯಕ್ರಮದಲ್ಲಿ ಕಾಂಗ್ರೆಸ್ ನಾಯಕರಾದ ಸೋನಿಯಾ ಗಾಂಧಿ, ರಾಹುಲ್ ಗಾಂಧಿ, ಗುಲಾಂ ನಬಿ ಅಜಾದ್, ಅಹ್ಮದ್ ಪಟೇಲ್, ಆನಂದ್ ಶರ್ಮಾ, ರಾಜಸ್ತಾನ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಹಾಜರಿದ್ದರು. 

86 ವರ್ಷದ ಡಾ. ಮನಮೋಹನ್ ಸಿಂಗ್ ರಾಜಸ್ತಾನದಿಂದ ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಬಿಜೆಪಿ ಸಿಂಗ್ ವಿರುದ್ಧ ಅಭ್ಯರ್ಥಿಯನ್ನು ಕಣಕ್ಕಿಳಿಸಿರಲಿಲ್ಲ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಚಿನ್ನಸ್ವಾಮಿಗೆ ಅಂತಾರಾಷ್ಟ್ರೀಯ ಮತ್ತು IPL ಪಂದ್ಯಗಳು ವಾಪಸ್; ಡಿಸಿಎಂ ಡಿ.ಕೆ. ಶಿವಕುಮಾರ್ ಭರವಸೆ
ಮನೆಯಲ್ಲಿ ಒಂದು ರೂಪಾಯಿ ಇಲ್ಲ ಆದ್ರೂ ಸಿಸಿಟಿವಿ ಯಾಕೆ ಹಾಕಿದ್ರಿ: ಸಿಕ್ಕಿದ್ದನ್ನು ದೋಚಿ ಪತ್ರ ಬರೆದಿಟ್ಟು ಹೋದ ಕಳ್ಳ