ಇವಿಎಂ ಸಂದೇಹ ಮೊದಲು ನಿವಾರಿಸಿ, ಪ್ರಣಬ್ ಮುಖರ್ಜಿ ಮನವಿ

Published : May 21, 2019, 08:48 PM ISTUpdated : May 21, 2019, 08:52 PM IST
ಇವಿಎಂ ಸಂದೇಹ ಮೊದಲು ನಿವಾರಿಸಿ, ಪ್ರಣಬ್ ಮುಖರ್ಜಿ ಮನವಿ

ಸಾರಾಂಶ

ಇವಿಎಂ ಕುರಿತಾಗಿ ವಿಪಕ್ಷಗಳು ಮಾಡುತ್ತಿರುವ ಆರೋಪದ ಬಗ್ಗೆ ಮಾಜಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಪ್ರತಿಕ್ರಿಯೆ ನೀಡಿದ್ದಾರೆ.

ನವದೆಹಲಿ(ಮೇ.21): ಲೋಕಸಭೆ ಚುನಾವಣೆಯಲ್ಲಿ ಇವಿಎಂ ಮತಯಂತ್ರಗಳನ್ನು ತಿದ್ದುಪಡಿ ಮಾಡಿರುವ ಆರೋಪಕ್ಕೆ ಕುರಿತು ಮಾಜಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ತೀವ್ರ ಕಳವಳ ವ್ಯಕ್ತಪಡಿಸಿದ್ದಾರೆ.

ಪ್ರಜಾಪ್ರಭುತ್ವದಲ್ಲಿ ಸವಾಲೊಡ್ಡುವ ಊಹಾಪೋಹಗಳಿಗೆ ಯಾವುದೇ ಸ್ಥಳವಿಲ್ಲ ಎಂದಿರುವ ಪ್ರಣಬ್, ಇವಿಎಂ ಮತಯಂತ್ರಗಳ ಕುರಿತು ಎದ್ದಿರುವ ಸಂದೇಹಗಳನ್ನು ಚುನಾವಣಾ ಆಯೋಗ ನಿವಾರಿಸಬೇಕು ಎಂದು ಮನವಿ ಮಾಡಿದ್ದಾರೆ.

ಇವಿಎಂ ಹೊತ್ತೊಯ್ದ 500 ಮುಸುಕುಧಾರಿಗಳು: ಆತಂಕದಲ್ಲಿ ಆಯೋಗ!

ಈ ಕುರಿತು ಹೇಳಿಕೆ ನೀಡಿರುವ ಪ್ರಣಬ್ ಮುಖರ್ಜಿ, ಮತದಾರರ ತೀರ್ಪನ್ನು ತಿರುಚುವ ಆರೋಪವನ್ನು ತಳ್ಳಿ ಹಾಕುವ ವರದಿ ಕುರಿತು ತಮಗೆ ಕಾಳಜಿ ಇದೆ ಎಂದು ತಿಳಿಸಿದ್ದಾರೆ. ಇವಿಎಂ ಮತಯಂತ್ರಗಳ ಸುರಕ್ಷತೆ ಚುನಾವಣಾ ಆಯೋಗದ ಜವಾಬ್ದಾರಿ ಎಂದಿರುವ ಅವರು, ಈ ಕುರಿತಾದ ಸಂದೇಹಗಳನ್ನು ಆದಷ್ಟು ಬೇಗ ನಿವಾರಿಸಬೇಕೆಂದು ಮನವಿ ಮಾಡಿದ್ದಾರೆ.

ಬೆಳಗ್ಗೆಯಷ್ಟೇ ಲೋಕಸಭಾ ಚುನಾವಣೆ ಸಂದರ್ಭದಲ್ಲಿ ಚುನಾವಣಾ ಆಯೋಗದ ಕಾರ್ಯವನ್ನು ಶ್ಲಾಘಿಸಿದ್ದ ಪ್ರಣಬ್ ಮುಖರ್ಜಿ, ಆಯೋಗದ ಕಾರ್ಯವನ್ನು ಅನುಮಾನದಿಂದ ನೋಡುವುದು ಉಚಿತವಲ್ಲ ಎಂದು ಹೇಳಿದ್ದನ್ನು ಇಲ್ಲಿ ಸ್ಮರಿಸಬಹುದು.

 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

Namma Metro Update: ಕೆಂಗೇರಿ ಮೆಟ್ರೋ ದುರಂತ; ಮೃತರ ಗುರುತು ಪತ್ತೆ, ಸಂಚಾರ ಸಹಜ ಸ್ಥಿತಿಗೆ!
ಕೆಂಗೇರಿ ಮೆಟ್ರೋ ನಿಲ್ದಾಣದಲ್ಲಿ ಟ್ರ್ಯಾಕ್‌ಗೆ ಹಾರಿ ವ್ಯಕ್ತಿ ಆತ್ಮ೧ಹತ್ಯೆ; ನೇರಳೆ ಮಾರ್ಗದಲ್ಲಿ ರೈಲು ಸಂಚಾರಕ್ಕೆ ವ್ಯತ್ಯಯ!