
ಕೊಲಂಬೊ(ಡಿ.27): ಶ್ರೀಲಂಕಾದ ಹಿರಿಯ ರಾಜಕಾರಣಿ ಮತ್ತು 2 ಬಾರಿ ಪ್ರಧಾನಿಯಾಗಿದ್ದ ರತ್ನಸಿರಿ ವಿಕ್ರಮನಾಯಕೆ(83) ಅವರು ಅನಾರೋಗ್ಯದ ಕಾರಣದಿಂದ ಇಂದು ಕೊನೆಯುಸಿರೆಳೆದಿದ್ದಾರೆ.
1970ರಿಂದ ಹಲವು ಮುಖ್ಯವಾದ ಸಚಿವಾಲಯಗಳನ್ನು ನಿರ್ವಹಿಸುತ್ತಿದ್ದ ವಿಕ್ರಮನಾಯಕೆ ಮಂಗಳವಾರ ಬೆಳಗ್ಗೆ ಅಸುನೀಗಿದ್ದಾರೆ ಎಂದು ಅವರ ಕುಟುಂಬ ಸದಸ್ಯರು ತಿಳಿಸಿದ್ದಾರೆ.
ಅನಾರೋಗ್ಯದಿಂದ ಡಿ.21ರಂದು ಖಾಸಗಿ ಆಸ್ಪತ್ರೆಗೆ ದಾಖಲಾಗಿ ತುರ್ತು ನಿಗಾ ಘಟಕದಲ್ಲಿ ಅವರು ಚಿಕಿತ್ಸೆ ಪಡೆಯುತ್ತಿದ್ದರು.
ಜನ ನೆಚ್ಚಿನ ನಾಯಕ ವಿಕ್ರಮನಾಯಕೆ ಅವರ ಅಗಲಿಕೆಗೆ ಶ್ರೀಲಂಕಾ ಅಧ್ಯಕ್ಷ ಮೈತ್ರಿಪಾಲ ಸಿರಿಸೇನಾ ಅವರು ಸಂತಾಪ ಸೂಚಿಸಿದ್ದಾರೆ. ಅಲ್ಲದೆ, ಲಂಕಾ ಮಾಜಿ ಅಧ್ಯಕ್ಷ ರಾಜಪಕ್ಸೆ ಅವರೂ ಸಂತಾಪ ಸೂಚಿಸಿ ಟ್ವೀಟ್ ಮಾಡಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.