ಜನ್ಮ ದಿನದಂದೇ ಕೊನೆಯುಸಿರೆಳೆದ ಮಾಜಿ ಸಿಎಂ!

Published : Oct 18, 2018, 05:45 PM IST
ಜನ್ಮ ದಿನದಂದೇ ಕೊನೆಯುಸಿರೆಳೆದ ಮಾಜಿ ಸಿಎಂ!

ಸಾರಾಂಶ

ಹುಟ್ಟಿದ ದಿನದಂದೇ ಕೊನೆಯುಸಿರೆಳೆದ ಮಾಜಿ ಮುಖ್ಯಮಂತ್ರಿ! ಉತ್ತರಾಖಂಡ್ ಮಾಜಿ ಸಿಎಂ ಎನ್.ಡಿ ತಿವಾರಿ ನಿಧನ! ಕಿಡ್ನಿ ಸಮಸ್ಯೆಯಿಂದ ಬಳಲುತ್ತಿದ್ದ ಹಿರಿಯ ಕಾಂಗ್ರೆಸ್ ನಾಯಕ! ಆಂಧ್ರದ ರಾಜ್ಯಪಾಲರಾಗಿಯೂ ಸೇವೆ ಸಲ್ಲಿಸಿದ್ದ ತಿವಾರಿ

ನವದೆಹಲಿ(ಅ.17): ದೀರ್ಘಾವಧಿಯ ಅನಾರೋಗ್ಯದಿಂದ ಬಳಲುತ್ತಿದ್ದ ಉತ್ತರಾಖಂಡ್ ಮಾಜಿ ಸಿಎಂ ಎನ್. ಡಿ ತಿವಾರಿ ತಮ್ಮ 93 ನೇ ಜನ್ಮದಿನದಂದೇ ಕೊನೆಯುಸಿರೆಳೆದಿದ್ದಾರೆ. 

ಪತ್ನಿ ಉಜ್ವಲಾ ಹಾಗೂ ಪುತ್ರ ರೋಹಿತ್ ಶೇಖರ್ ಅವರನ್ನು ಎನ್. ಡಿ ತಿವಾರಿ ಅಗಲಿದ್ದಾರೆ. ಕಿಡ್ನಿ ಸಮಸ್ಯೆಯಿಂದ ಬಳಲುತ್ತಿದ್ದ ಅವರನ್ನು ಕಳೆದ ಜುಲೈ ನಲ್ಲಿ ಆಸ್ಪತ್ರೆಗೆ ದಾಖಲಿಸಲಾಗಿತ್ತು.  

ಕಳೆದ ಕೆಲವು ತಿಂಗಳುಗಳಿಂದ ಅವರ ಆರೋಗ್ಯ ಮತ್ತಷ್ಟು ಕ್ಷೀಣಿಸಿತ್ತು ಎಂದು ಆಸ್ಪತ್ರೆ ಮೂಲಗಳು ತಿಳಿಸಿವೆ. ಎನ್. ಡಿ ತಿವಾರಿ ಆಂಧ್ರಪ್ರದೇಶದ ರಾಜ್ಯಪಾಲರಾಗಿಯೂ ಸೇವೆ ಸಲ್ಲಿಸಿದ್ದರು.

ಇನ್ನು ತಿವಾರಿ ನಿಧನಕ್ಕೆ ಪ್ರಾಧಾನಿ ನರೇಂದ್ರ ಮೋದಿ ಸೇರಿದಂತೆ ಅನೇಕ ಗಣ್ಯರು ಕಂಬನಿ ಮಿಡಿದಿದ್ದಾರೆ. ಎನ್.ಡಿ ತಿವಾರಿ ರಾಜಕೀಯ ಕ್ಷೇತ್ರದಲ್ಲಿ ನೀಡಿದ ಕೊಡುಗೆ ಅನನ್ಯವಾದುದು ಎಂದು ಪ್ರಧಾನಿ ಮೋದಿ ಟ್ವೀಟ್ ಮಾಡಿದ್ದಾರೆ.
 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ದಿನಕ್ಕೆರಡು ಬಾರಿ ಠಾಣೆಗೆ ಹಾಜರಾಗಲು ಸೂಚನೆ, ಆದೇಶ ಪ್ರಶ್ನಿಸಿದ ಆರೋಪಿಗೆ 1 ಲಕ್ಷ ರೂ ಪರಿಹಾರ
ಕಂದನ ಸ್ನಾನ ಮಾಡಿಸಲು ಹೋದಾಗ ದುರ್ಘಟನೆ, ಗೀಸರ್ ಸೋರಿಕೆಯಿಂದ ತಾಯಿ-ಮಗು ಸಾವು