ಸಂಪ್'ಗೆ ಬಿದ್ದು ನಾಲ್ವರ ದುರ್ಮರಣ

Published : Oct 08, 2017, 07:42 PM ISTUpdated : Apr 11, 2018, 01:07 PM IST
ಸಂಪ್'ಗೆ ಬಿದ್ದು ನಾಲ್ವರ ದುರ್ಮರಣ

ಸಾರಾಂಶ

ಕಾರ್ಮಿಕರಾದ ನಾಗಪ್ಪ, ನಾರಾಯಣಪ್ಪ, ಪೆದ್ದಣ್ಣ, ಜನಾರ್ಧನ ಹಾಗೂ ಚೆನ್ನಪ್ಪ ಸಂಪ್​ ಕೆಲಸ ಮಾಡುತ್ತಿದ್ದರು.

ಗೌರಿಬಿದನೂರು(ಅ.08): ನಿರ್ಮಾಣ ಹಂತದ ಸಂಪ್​ನಲ್ಲಿ ಬಿದ್ದು ಉಸಿರುಗಟ್ಟಿ ನಾಲ್ವರು ಸಾವನ್ನಪ್ಪಿರುವ ಘಟನೆ ಚಿಕ್ಕಬಳ್ಳಾಪುರದಲ್ಲಿ ನಡೆದಿದೆ.

ಚಿಕ್ಕಬಳ್ಳಾಪುರ ಗೌರಿಬಿದನೂರು ತಾಲೂಕಿನ ದಿನ್ನೇನಹಳ್ಳಿಯಲ್ಲಿ ರಾಮಕೃಷ್ಣಯ್ಯ ಎಂಬುವರಿಗೆ ಸೇರಿದ ಕಟ್ಟಡದಲ್ಲಿ ಸಂಪ್​ ಕಾಮಗಾರಿ ನಡೆದಿತ್ತು. ಕಾರ್ಮಿಕರಾದ ನಾಗಪ್ಪ, ನಾರಾಯಣಪ್ಪ, ಪೆದ್ದಣ್ಣ, ಜನಾರ್ಧನ ಹಾಗೂ ಚೆನ್ನಪ್ಪ ಸಂಪ್​ ಕೆಲಸ ಮಾಡುತ್ತಿದ್ದರು. ಆ ವೇಳೆ ಉಸಿರುಗಟ್ಟಿ ನಾಲ್ವರು ಸ್ಥಳದಲ್ಲೇ ಮೃತಪಟ್ಟರೆ, ಇನ್ನೊಬ್ಬ ಕಾರ್ಮಿಕ ಚೆನ್ನಪ್ಪನ ಸ್ಥಿತಿ ಗಂಭೀರವಾಗಿದೆ. ಘಟನಾ ಸ್ಥಳದಲ್ಲಿ ಮೃತ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿತ್ತು. ಸ್ಥಳಕ್ಕೆ  ಮಂಚೇನಹಳ್ಳಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

Suvarna Special: ಮಮತಾ ಬತ್ತಳಿಕೆ ಹೊಸ ಅಸ್ತ್ರ ಯಾವುದು ? ಮೋದಿ ವಿರುದ್ಧ ಹಿಂದೂ ಅಸ್ತ್ರ ಹಿಡಿದ ದೀದಿ..!
ಸಿಎಂ ಕುರ್ಚಿಗೆ 500 ಕೋಟಿ, ಸ್ಫೋಟಕ ಹೇಳಿಕೆ ಬೆನ್ನಲ್ಲೇ ಸಿಧು ಪತ್ನಿ ಕಾಂಗ್ರೆಸ್‌ನಿಂದ ಅಮಾನತು