
ನವದೆಹಲಿ(ಮೇ.28): ದೇಶದ ಒಟ್ಟು 10 ರಾಜ್ಯಗಳಲ್ಲಿ ಇಂದು ನಾಲ್ಕು ಲೋಕಸಭಾ ಸ್ಥಾನ ಮತ್ತು ವಿಧಾನಸಭಾ ಸ್ಥಾನಗಳಿಗೆ ಉಪಚುನಾವಣೆ ಚುನಾವಣೆ ನಡೆಯುತ್ತಿದೆ. ಉತ್ತರಪ್ರದೇಶದ ಕೈರಾನಾ, ಮಹಾರಾಷ್ಟ್ರದ ಪಾಲ್ಗಾರ್, ಭಂಡಾರಾ-ಗೊಂಡಿಯಾ ಹಾಗೂ ನಾಗಾಲ್ಯಾಂಡ್ ಲೋಕಸಭಾ ಸ್ಥಾನಗಳಿಗೆ ಉಪಚುನಾವಣೆ ನಡೆಯುತ್ತಿದೆ.
ಕೈರಾನಾ ಬಿಜೆಪಿ ಪಾಲಿಗೆ ಪ್ರತಿಷ್ಠಿತ ಕ್ಷೇತ್ರವಾಗಿದ್ದು, ಇಲ್ಲಿಂದ ಈ ಹಿಂದೆ ಆಯ್ಕೆಯಾಗಿದ್ದ ಹುಕುಮ್ ಸಿಂಗ್ ಸಂಸದರಾಗಿ ಆಯ್ಕೆಯಾಗಿದ್ದರು. ಆದರೆ ಹುಕುಮ್ ಸಿಂಗ್ ಅವರ ಅಕಾಲಿಕ ನಿಧನದಿಂದಾಗಿ ಈ ಸ್ಥಾನ ತೆರವಾಗಿದ್ದು, ಅವರ ಪುತ್ರಿ ಮೃಗಾಂಕಾ ಸಿಂಗ್ ಬಿಜೆಪಿ ಅಭ್ಯರ್ಥಿಯಾಗಿ ಸ್ಪಧಿರ್ಧಿಸುತ್ತಿದ್ದಾರೆ. ಇನ್ನು ಭಂಡಾರಾ-ಗೊಂಡಿಯಾದ ಬಿಜೆಪಿ ಸಂಸದ ನಾನಾ ಪಟೋಲೆ ಪಕ್ಷ ತೊರೆದು ಕಾಂಗ್ರೆಸ್ ಸೇರಿದ್ದು, ಈ ಹಿನ್ನೆಲೆಯಲ್ಲಿ ಇಲ್ಲಿ ಉಪಚುನಾಣೆ ನಡೆಯುತ್ತಿದೆ.
ನಾಗಾಲ್ಯಾಂಡ್ ನ ನೈಫ್ಯೂ ರಿಯೋ ಸಿಎಂ ಆದ ಕಾರಣ ತಮ್ಮ ಲೋಕಸಭೆ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಈ ಹಿನ್ನೆಲೆಯಲ್ಲಿ ಇಲ್ಲಿ ಉಪಚುನಾವಣೆ ಘೋಷಣೆಯಾಗಿದೆ. ಇದೇ ವೇಳೆ ಕೇರಳ, ಬಿಹಾರ, ಮೇಘಾಲಯ ವಿಧಾನಸಭೆಗೆ ಇಂದು ಉಪಚುನಾವಣೆ ನಡೆಯುತ್ತಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.