ಭೀಕರ ರಸ್ತೆ ಅಪಘಾತ : ನಾಲ್ವರು ಟಿಎಂಸಿ ಮುಖಂಡರು ಸೇರಿ 6 ಮಂದಿ ದುರ್ಮರಣ

Published : Jun 27, 2018, 01:53 PM IST
ಭೀಕರ ರಸ್ತೆ ಅಪಘಾತ :  ನಾಲ್ವರು ಟಿಎಂಸಿ ಮುಖಂಡರು ಸೇರಿ 6 ಮಂದಿ ದುರ್ಮರಣ

ಸಾರಾಂಶ

ಬೆಳ್ಳಂಬೆಳಗ್ಗೆ ಸಂಭವಿಸಿದ ಭೀಕರ ಅಪಘಾತದಲ್ಲಿ ನಾಲ್ವರು ಟಿಎಂಸಿ ಮುಖಂಡರು ಸೇರಿ 6 ಮಂದಿ ಮೃತಪಟ್ಟಿದ್ದಾರೆ. ಅಲ್ಲದೇ 20 ಮಂದಿ ಗಾಯಗೊಂಡಿದ್ದು, ಅದರಲ್ಲಿ ಕೆಲವರ ಸ್ಥಿತಿ ಚಿಂತಾಜನಕವಾಗಿದೆ. 

ಕೋಲ್ಕತಾ: ಬೆಳ್ಳಂಬೆಳಗ್ಗೆ ಸಂಭವಿಸಿದ ಭೀಕರ ಅಪಘಾತದಲ್ಲಿ ನಾಲ್ವರು ಟಿಎಂಸಿ ಮುಖಂಡರು ಸೇರಿ 6 ಮಂದಿ ಮೃತಪಟ್ಟಿದ್ದಾರೆ. ಅಲ್ಲದೇ 20 ಮಂದಿ ಗಂಭೀರವಾಗಿ ಗಾಯಗೊಂಡಿದ್ದು, ಅವರ ಸ್ಥಿತಿ ಚಿಂತಾಜನಕವಾಗಿದೆ. 

ಪಶ್ಚಿಮ ಬಂಗಾಳದ ಪೂರ್ವ ಮಿಡ್ನಾಪುರ್ ಪ್ರದೇಶದ  ರಾಷ್ಟ್ರೀಯ ಹೆದ್ದಾರಿ 116 ನಲ್ಲಿ  ಈ ದುರ್ಘಟನೆ ಸಂಭವಿಸಿದೆ. ಮುಂಜಾನೆ 5 ಗಂಟೆಗೆ  ಹೌವ್ರಾ ಪ್ರದೇಶದಲ್ಲಿ ವೇಗವಾಗಿ ಬರುತ್ತಿದ್ದ ಖಾಸಗಿ ಬಸ್ ಕಾರಿಗೆ  ಗುದ್ದಿ ಅಪಘಾತ ಸಂಭವಿಸಿದೆ. 

ಪ್ರತ್ಯಕ್ಷ ದರ್ಶಿಗಳು ಹೇಳುವಂತೆ ಕಾರ್ ಸರಿಯಾದ ಮಾರ್ಗದಲ್ಲೇ ಆಗಮಿಸುತ್ತಿತ್ತು. ಆದರೆ ಬಸ್ ಮಾತ್ರ ಕಾರನ್ನು ಓವರ್ ಟೇಕ್ ಮಾಡುವ ಉದ್ದೇಶದಿಂದ ವೇಗವಾಗಿ ಬಂದು ಕಾರ್ ಗೆ ಗುದ್ದಿದೆ. ಇದರಿಂದ ಭೀಕರ ಅಪಘಾತ  ಸಂಭವಿಸಿದೆ ಎಂದು ಹೇಳಿದ್ದಾರೆ. 

 ಒಟ್ಟು  ಐವರು ಸ್ಥಳದಲ್ಲೇ ಸಾವನ್ನಪ್ಪಿದ್ದು, ಓರ್ವ ವ್ಯಕ್ತಿ ಆಸ್ಪತ್ರೆಗೆ ಸಾಗಿಸುವ ಮಾರ್ಗಮಧ್ಯೆ ಮೃತಪಟ್ಟಿದ್ದಾರೆ. ಗಾಯಾಳುಗಳಿಗೆ ಸದ್ಯ ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಹೊಸ ವರ್ಷದ ಆರಂಭದಲ್ಲೇ ಮಾರುಕಟ್ಟೆಗೆ ಎಂಟ್ರಿ ನೀಡಲಿದೆ ರೆಡ್ಮಿ ಮಾಸ್ಟರ್‌ ಪಿಕ್ಸೆಲ್‌ ಫೋನ್‌, ಬೆಲೆ ಎಷ್ಟು ಕಡಿಮೆ ಗೊತ್ತಾ?
ರೈಲ್ವೆ ಪ್ರಯಾಣ, ಟಿಕೆಟ್​ ಬುಕಿಂಗ್​ ಎಲ್ಲವೂ ಬಲು ಸುಲಭ : ಸಂಪೂರ್ಣ ಮಾಹಿತಿ ಈ ಒಂದೇ ಒಂದು ಆ್ಯಪ್​ನಲ್ಲಿ!