
ಶ್ರೀನಗರ (ಡಿ.31): ಜಮ್ಮು-ಕಾಶ್ಮೀರದ ಪುಲ್ವಾಮಾ ಜಿಲ್ಲೆಯಲ್ಲಿ ಕೇಂದ್ರ ಮೀಸಲು ಪೊಲೀಸ್ ಪಡೆ ತರಬೇತಿ ಶಿಬಿರದ ಮೇಲೆ ಉಗ್ರಗಾಮಿಗಳು ತಡರಾತ್ರಿ ದಾಳಿ ನಡೆಸಿದ್ದಾರೆ.
ಈ ದಾಳಿಯಲ್ಲಿ ಸಿಆರ್'ಪಿಎಫ್'ನ ನಾಲ್ವರು ಯೋಧರು ಹುತಾತ್ಮರಾದರೆ ಇತರ ಮೂವರು ಯೋಧರು ಗಾಯಗೊಂಡಿದ್ದಾರೆ. ಅಲ್ಲದೇ ಭಾರತೀಯ ಸೇನೆಯ ಗುಂಡಿನ ದಾಳಿಗೆ ಮೂವರು ಉಗ್ರರು ಸಾವನ್ನಪ್ಪಿದ್ದಾರೆ.
ಜೈಶ್-ಇ-ಮೊಹಮ್ಮದ್ ಉಗ್ರಗಾಮಿಗಳ ಗುಂಪು ರಾತ್ರಿ 2 ಗಂಟೆ ಸುಮಾರಿಗೆ ಕಾಶ್ಮೀರ ಕಣಿವೆಯ ಲೆಥಪೋರಾ ಗ್ರಾಮದ ಸಿಆರ್'ಪಿಎಫ್'ನ 185 ನೇ ಬ್ಯಾಟಲಿನ್ ಶಿಬಿರದ ಮೇಲೆ ಗುಂಡಿನ ಮಳೆ ಸುರಿಸಿದ್ದಾರೆ. ಕಾರ್ಯಚರಣೆ ಇನ್ನು ಮುಂದುವರೆದಿದ್ದು, ಗಾಯಗೊಂಡಿರುವ ಯೋಧರನ್ನು ಶ್ರೀನಗರದ ಆಸ್ಪತ್ರೆಗೆ ದಾಖಲಿಸಲಾಗಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.