
ಬೆಂಗಳೂರು(ಜ.05): ಬಾಣಸವಾಡಿಯ ಕಮ್ಮನಹಳ್ಳಿಯಲ್ಲಿ ನಡೆದ ಯುವತಿ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ತೀವ್ರಗತಿಯಲ್ಲಿ ಸಾಗಿದೆ. ಈಗಾಗಲೇ 12 ಜನ ಶಂಕಿತ ಅರೋಪಿಗಳನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದ ಪೊಲೀಸರು ನಾಲ್ವರು ಆರೋಪಿಗಳನ್ನು ಬಂಧಿಸಿದ್ದಾರೆ.
ಕಳೆದ ರಾತ್ರಿ 12 ಜನರನ್ನ ಅಜ್ಞಾತ ಸ್ಥಳವೊಂದರಲ್ಲಿ ನಾಲ್ಕು ತಂಡಗಳು ವಿಚಾರಣೆಗೆ ಒಳಪಡಿಸಿದ್ದಾರೆ. ಪೂರ್ವ ವಿಭಾಗದ ಡಿಸಿಪಿ ಅಜಯ್ ಹಿಲೋರಿ, ಎಸಿಪಿ ರವಿಕುಮಾರ್ ಅವರು ರಾತ್ರಿ ಇಡೀ ವಶದಲ್ಲಿರುವ ಯುವಕರನ್ನ ವಿಚಾರಣೆಗೆ ಒಳಪಡಿಸಿದ್ದ ಕೃತ್ಯ ಎಸಗಿದ್ದ ಇಬ್ಬರು ಕೀಚಕರ ಮಾಹಿತಿ ಕಲೆ ಹಾಕಿದ್ದರು. ಇದರ ಇದೀಗ ನಾಲ್ವರನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಗಳನ್ನು ರಾಜು, ಚಿನ್ನು, ಲೆನೋ ಹಾಗೂ ಅಯ್ಯಪ್ಪ ಎಂದು ಗುರುತಿಸಲಾಗಿದೆ.
ಬೈಕ್'ನಲ್ಲಿ ಯುವತಿಯನ್ನು ಫಾಲೋ ಮಾಡಿಕೊಂಡು ಬಂದು ಆಕೆಯನ್ನು ಅಪ್ಪಿ ಹಿಡಿದು ಹಿಂಸಿಸಿದವನು ಲಿನೋ ಹಾಗೂ ಗಾಡಿಯಲ್ಲೇ ಕುಳಿತು ಆತನಿಗೆ ಸಾಥ್ ನೀಡಿದವನು ಲೆನೋ ಎಂದು ತಿಳಿದು ಬಂದಿದೆ. ಈ ವೇಳೆ ಮತ್ತೊಂದು ಗಾಡಿಯಲ್ಲಿ ರಸ್ತೆ ಬದಿ ನಿಂತಿದ್ದವರು ರಾಜು ಮತ್ತು ಚಿನ್ನು ಎಂಬ ಮಾಹಿತಿ ಲಭ್ಯವಾಗಿದೆ. ಅಲ್ಲದೆ ಈ ನಾಲ್ವರೂ ಬೆಂಗಳೂರಿನ ಫ್ರೇಜರ್ ಟೌನ್ ನಿವಾಸಿಗಳಾಗಿದ್ದಾರೆ.
ಘಟನಾ ಸ್ಥಳದಲ್ಲಿ ಇನ್ನಿಬ್ಬರು ಸಹಚರರರಿದ್ದರು ಎಂಬ ಮಾಹಿತಿ ಪೊಲೀಸರಿಗೆ ದೊರಕಿದೆ. ಆದರೆ ಅವರ್ಯಾರು ಎಂಬುವುದು ಇನ್ನಷ್ಟೇ ಪತ್ತೆ ಹಚ್ಚಬೇಕಾಗಿದೆ. ಈ ನಿಟ್ಟಿನಲ್ಲಿ ಪೊಲೀಸರು ತನಿಖೆ ಮುಂದುವರೆಸಿದ್ದು, ಸಿಸಿಟಿವಿ ದೃಶ್ಯಗಳ ಪರಿಶೀಲನೆ ನಡೆಸುತ್ತಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.