
ನವದೆಹಲಿ (ಜ.07): ಭಾರತೀಯ ಜನತಾ ಪಕ್ಷದ ನಾಯಕ ಸಾಕ್ಷಿ ಮಹಾರಾಜ್ ನೀಡಿರುವ ವಿವಾದಾತ್ಮಕ ಹೇಳಿಕೆಯಿಂದ ಬಿಜೆಪಿ ಅಂತರ ಕಾಯ್ದುಕೊಂಡಿದೆ. ಇವರ ಹೇಳಿಕೆ ಪಕ್ಷದ ನಿಲುವನ್ನು ಹೇಳುತ್ತಿಲ್ಲ, ಇದು ಅವರ ವೈಯಕ್ತಿಕ ಅಭಿಪ್ರಾಯ ಎಂದು ಬಿಜೆಪಿ ಹೇಳಿದೆ.
ಚುನಾವಣಾ ‘ಪಂಚ’ ಜನ್ಯ ಮೊಳಗಿದ್ದು ಈ ಸಂದರ್ಬದಲ್ಲಿ ಸಾಕ್ಷಿ ಮಹಾರಾಜ್ ನೀಡಿರುವ ಹೇಳಿಕೆ ಭಾರತೀಯ ಜನತಾ ಪಕ್ಷಕ್ಕೆ ಇರುಸುಮುರುಸು ಉಂಟು ಮಾಡಿದೆ.
ಮಹಿಳೆ ಮಕ್ಕಳನ್ನು ಹೆರುವ ಯಂತ್ರವಲ್ಲ. ನಾಲ್ವರು ಪತ್ನಿಯರು, 40 ಮಕ್ಕಳು, 3 ವಿಚ್ಚೇದನ ಇವೆಲ್ಲಾ ಒಪ್ಪತಕ್ಕದ್ದಲ್ಲ. ಭಾರತದ ಜನಸಂಖ್ಯೆ ಹೆಚ್ಚಾಗಲು ಹಿಂದೂಗಳು ಕಾರಣವಲ್ಲ. ಹಿಂದೂಗಳ ಸಂಖ್ಯೆ ಕಡಿಮೆಯಾದರೆ ದೇಶ ಇಬ್ಭಾಗವಾಗುತ್ತದೆ ಎಂದು ಸಾಕ್ಷಿ ಮಹಾರಾಜ್ ಹೇಳಿದ್ದರು. ಈ ಹೇಳಿಕೆ ಒಂದು ಧರ್ಮದವರ ಕೆಂಗಣ್ಣಿಗೆ ಗುರಿಯಾಗಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.