
ಬೆಂಗಳೂರು[ಜು.03]: ಇನ್ನುಮುಂದೆ ಮುಂದೆ ರಾಜ್ಯ ಹೈಕೋರ್ಟ್ ಹಾಗೂ ರಾಜ್ಯದ ಎಲ್ಲ ಅಧೀನ ನ್ಯಾಯಾಲಯಗಳ ಸಿಬ್ಬಂದಿಗೂ ನಾಲ್ಕನೇ ಶನಿವಾರದ ರಜೆ ಸಿಗಲಿದೆ. ಈ ಕುರಿತು ಹೈಕೋರ್ಟ್ನ ರಿಜಿಸ್ಟ್ರಾರ್ ಜನರಲ್ ವಿ.ಶ್ರೀಶಾನಂದ್ ಅವರು ಮಂಗಳವಾರ ಅಧಿಸೂಚನೆ ಹೊರಡಿಸಿದ್ದಾರೆ.
ನಾಲ್ಕನೇ ಶನಿವಾರದ ರಜೆ ಈ ತಿಂಗಳಿಂದಲೇ ಎಲ್ಲ ನ್ಯಾಯಾಲಯಗಳಿಗೂ ಅನ್ವಯವಾಗಲಿದೆ ಎಂದು ಆದೇಶದಲ್ಲಿ ತಿಳಿಸಲಾಗಿದೆ. ರಾಜ್ಯ ಸರ್ಕಾರಿ ನೌಕರರಿಗೆ ಪ್ರತಿ ತಿಂಗಳ ನಾಲ್ಕನೇ ಶನಿವಾರ ರಜೆ ಘೋಷಣೆ ಮಾಡಿ ಸರ್ಕಾರ ಆದೇಶ ಹೊರಡಿಸಿತ್ತು. ಆದರೆ, ಸರ್ಕಾರ ರಜೆ ಘೋಷಿಸಿದ ನಂತರ ಹೈಕೋರ್ಟ್ ಅಧಿಕೃತವಾಗಿ ನಿರ್ಣಯ ಕೈಗೊಳ್ಳಬೇಕಿತ್ತು.
ಹೀಗಾಗಿ ಜೂ.22ರ 4ನೇ ಶನಿವಾರ ರಜೆ ಘೋಷಿಸಿರಲಿಲ್ಲ. ಜೂ.26ರಂದು ಹೈಕೋರ್ಟ್ನ ಪೂರ್ಣ ಪೀಠ ಎಲ್ಲ ನ್ಯಾಯಾಲಯಗಳ ಸಿಬ್ಬಂದಿಗೂ ನಾಲ್ಕನೇ ಶನಿವಾರದ ರಜೆ ನೀಡಲು ನಿರ್ಣಯಿಸಿತ್ತು
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.