
ಇದು ಸುಳ್ಸುದ್ದಿ, ಕೇವಲ ತಮಾಷೆಗಾಗಿ ನೀಡಲಾಗಿದೆ
ಭಾರತೀಯ ವಾಯುಪಡೆ ವಿಮಾನಗಳು ಪಾಕಿಸ್ತಾನದಲ್ಲಿನ ಉಗ್ರಗಾಮಿ ಶಿಬಿರಗಳ ಮೇಲೆ ಬಾಂಬ್ ದಾಳಿ ಮಾಡಿ ಉಗ್ರರನ್ನು ಕೊಂದಿದ್ದಕ್ಕೆ ಸಾಕ್ಷ್ಯ ಏನಿದೆ ಎಂದು ಕೇಳುವವರ ಸಂಖ್ಯೆ ನಿಧಾನವಾಗಿ ಹೆಚ್ಚಾಗತೊಡಗಿದೆ. ಇಂಥವರ ಬಾಯಿ ಮುಚ್ಚಿಸಲು ಕೇಂದ್ರ ಸರ್ಕಾರ ಉಪಾಯವೊಂದನ್ನು ಮಾಡಿದೆ. ವಾಯುಪಡೆ ನಡೆಸಿದ ಸಾಹಸದ ಬಗ್ಗೆ ಯಾರಿಗೆಲ್ಲಾ ಅನುಮಾನವಿದೆಯೋ ಅವರನ್ನೆಲ್ಲಾ ಖುದ್ದಾಗಿ ಬಾಂಬ್ ದಾಳಿ ನಡೆದ ಸ್ಥಳಕ್ಕೆ ಕಳುಹಿಸಲು ಸರ್ಕಾರ ನಿರ್ಧರಿಸಿದೆ.
ಇದಕ್ಕಾಗಿ ಉಚಿತ ಪ್ರವಾಸವನ್ನು ಆಯೋಜಿಸಿದೆ. ಉಗ್ರಗಾಮಿ ಶಿಬಿರ ನಾಶವಾಗಿರುವ ಬಗ್ಗೆ ಯಾರಿಗೆ ಶಂಕೆ ಇದೆಯೋ ಅವರನ್ನು ಗಡಿ ನಿಯಂತ್ರಣ ರೇಖೆ ಬಳಿಗೆ ಕರೆದೊಯ್ದು ಸುರಕ್ಷಿತವಾಗಿ ಪಾಕ್ ಆಕ್ರಮಿತ ಕಾಶ್ಮೀರದೊಳಕ್ಕೆ ಕಳುಹಿಸಲಾಗುತ್ತದೆ. ಅಲ್ಲಿಂದ ಬಾಲಾಕೋಟ್ಗೆ ಹೋಗಿ ಘಟನಾ ಸ್ಥಳ ಪರಿಶೀಲಿಸಬಹುದು. ಅಲ್ಲಿ ಏನಾದರೂ ಅನಾಹುತವಾದರೆ ತಾನು ಹೊಣೆಯಲ್ಲ ಎಂದು ಸರ್ಕಾರ ಸ್ಪಷ್ಟಪಡಿಸಿದೆ ಎಂದು ಸುಳ್ಸುದ್ದಿ ಸಂಸ್ಥೆಗೆ ಮೂಲಗಳು ತಿಳಿಸಿವೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.