ಕರ್ನಾಟಕದ ಜಲಿಯನ್ ವಾಲಾಬಾಗ್ ವಿದುರಾಶ್ವತ್ಥ

Published : Aug 15, 2018, 09:47 AM ISTUpdated : Sep 09, 2018, 08:31 PM IST
ಕರ್ನಾಟಕದ ಜಲಿಯನ್ ವಾಲಾಬಾಗ್ ವಿದುರಾಶ್ವತ್ಥ

ಸಾರಾಂಶ

ಪಂಜಾಬ್‌ನ ಜಲಿಯನ್ ವಾಲಾಬಾಗ್  ಹತ್ಯಾಕಾಂಡ ಭಾರತ ಸ್ವಾತಂತ್ರ್ಯ ಸಂಗ್ರಾಮದ ಕಹಿ ಅಧ್ಯಾಯ. ಅಂಥದ್ದೇ ಕಹಿ ಅಧ್ಯಾಯಕ್ಕೆ ಕರ್ನಾಟಕದ ವಿಧುರಾಶ್ವತ್ಥವೂ  ಸಾಕ್ಷಿಯಾಗಿತ್ತು.

ಚಿಕ್ಕಬಳ್ಳಾಪುರ (ಆ. 15): ಪಂಜಾಬ್‌ನ ಜಲಿಯನ್ ವಾಲಾಬಾಗ್ ಹತ್ಯಾಕಾಂಡ ಭಾರತ ಸ್ವಾತಂತ್ರ್ಯ ಸಂಗ್ರಾಮದ  ಕಹಿ ಅಧ್ಯಾಯ. ಅಂಥದ್ದೇ ಕಹಿ ಅಧ್ಯಾಯಕ್ಕೆ ಕರ್ನಾಟಕದ ವಿಧುರಾಶ್ವತ್ಥವೂ ಸಾಕ್ಷಿಯಾಗಿತ್ತು.

ಬ್ರಿಟಿಷರ ವಿರುದ್ಧ ಹೋರಾಡಿ 30 ಕ್ಕೂ ಹೆಚ್ಚು ಜನರು ತಮ್ಮ ಪ್ರಾಣವನ್ನೇ ತ್ಯಾಗ ಮಾಡಿದ ಚಿಕ್ಕಬಳ್ಳಾಪುರ ಜಿಲ್ಲೆಯ ಗೌರಿ ಬಿದನೂರು ತಾಲೂಕಿನ ಪುಟ್ಟ ಗ್ರಾಮ ವಿಧುರಾಶ್ವತ್ಥ ಕರ್ನಾಟಕ ಸ್ವಾತಂತ್ರ್ಯ ಸಂಗ್ರಾಮದ ಇತಿಹಾಸದಲ್ಲಿ ‘ಕರ್ನಾಟಕದ ಜಲಿಯನ್ ವಾಲಾ ಬಾಗ್ ಹತ್ಯಾಕಾಂಡ’ ಎಂದೇ ಹೆಸರಾಗಿದೆ.

1938 ರ ಏಪ್ರಿಲ್ 25 ರಂದುವಿಧುರಾಶ್ವತ್ಥದಲ್ಲಿ ಕಾಂಗ್ರೆಸ್ ಸಮಿತಿಯು ಧ್ವಜಾರೋಹಣ ಕಾರ್ಯಕ್ರಮ ಹಮ್ಮಿಕೊಂಡಿತ್ತು. ಇದಕ್ಕೆ ಬ್ರಿಟಿಷ್ ಸರ್ಕಾರ ನಿಷೇಧಾಜ್ಞೆ ಹೇರಿತು. ಇದನ್ನು ಉಲ್ಲಂಘಿಸಿ ಧ್ವಜಾರೋಹಣ ಮಾಡಿದ್ದ ಹೋರಾಟಗಾರರ ಮೇಲೆ ಬ್ರಿಟಿಷರು ಗುಂಡಿನ ದಾಳಿ ನಡೆಸಿದರು. ಈ ದಾಳಿಯಲ್ಲಿ 30 ಕ್ಕೂ ಹೆಚ್ಚು ಜನರು ಮೃತ ಪಟ್ಟರು, ಹಲವರು ಗಾಯಗೊಂಡರು. ಬಲಿದಾನ ಮಾಡಿದವರಲ್ಲಿ 10 ದೇಹಗಳು ಮಾತ್ರ ಪತ್ತೆಯಾದವು. ಈ ಹೋರಾಟ ಕರ್ನಾಟಕದ
ಜಲಿಯನ ವಾಲಾಬಾಗ್ ಎಂದೇ ಖ್ಯಾತಿಯಾಗಿದೆ. 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಡಿಕೆಸು ಧ್ವನಿಯಲ್ಲಿ ಮಾತಾಡಿದ್ದರು ಎನ್ನುವ ಆರೋಪ.. 'ಬಂಗಾರಿ' ಕೇಸ್‌ನಲ್ಲಿ ನಟ ಧರ್ಮಗೆ ಧ್ವನಿ ಪರೀಕ್ಷೆ?
Vande Mataram ಎರಡು ಪದಗಳ ಅರ್ಥ ವಿವರಿಸಿದ ಇಕ್ರಾ ಹಸನ್: ಸಂಸದೆಯ ಮಾತು ವೈರಲ್