
ಮಂಡ್ಯ (ಆ. 15): ಸ್ವಾತಂತ್ರ್ಯ ಹೋರಾಟದಲ್ಲಿ ಶಿವಪುರದ ಧ್ವಜ ಸತ್ಯಾಗ್ರಹ ಪ್ರಖ್ಯಾತವಾಗಿದೆ.
ಮಂಡ್ಯದ ಬಳಿ ಶಿಂಷಾ ನದಿ ದಂಡೆಯ ಮೇಲಿರುವ ಶಿವಪುರ ಗ್ರಾಮದಲ್ಲಿ 1938 ರ ಏಪ್ರಿಲ್ 9 ರಂದು ತಿರುಮಲೇಗೌಡ ಎಂಬವರ ಹೊಲದಲ್ಲಿ ತ್ರಿವರ್ಣ ಧ್ವಜವನ್ನು ಹಾರಿಸಲಾಯಿತು. ಮೈಸೂರು ಅರಸರ ಮೂಲಕ ಬ್ರಿಟಿಷ್ ಸರ್ಕಾರವು ರೈತರ ಮೇಲೆ ಹೇರಿದ ತೆರಿಗೆಯನ್ನು ಪ್ರತಿಭಟಿಸುವುದಕ್ಕಾಗಿ ಈ ಪ್ರತಿಭಟನೆ ನಡೆದಿತ್ತು.
ಆ ಕಾಲದಲ್ಲಿ ತ್ರಿವರ್ಣ ಧ್ವಜವನ್ನು ಹಾರಿಸುವುದು ಅಪರಾಧವಾಗಿತ್ತು. ಆದರೆ ಸ್ವಾತಂತ್ರ್ಯ ಹೋರಾಟಗಾರರು ಮೈಸೂರು ಕಾಂಗ್ರೆಸ್ನ ಮೊದಲ ಅಧಿವೇಶನವನ್ನು ಶಿವ ಪುರದಲ್ಲಿ ಏರ್ಪಡಿಸಿ ತ್ರಿವರ್ಣ ಧ್ವಜವನ್ನು ಹಾರಿಸಲು ನಿರ್ಧರಿಸಿದರು. ಅದರಲ್ಲಿ 10 ಸಾವಿರ ಜನರು ಭಾಗವಹಿಸಿದ್ದರು. ಸದ್ಯ ಅಲ್ಲಿ ಸತ್ಯಾಗ್ರಹ ಸ್ಮಾರಕವನ್ನು ನಿರ್ಮಿಸಲಾಗಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.