ವಿವಿಗಳಲ್ಲಿ ಅಭಿವ್ಯಕ್ತಿ ಸ್ವಾತಂತ್ರ್ಯ ಅಪಾಯದಲ್ಲಿ: ಮನಮೋಹನ್ ಸಿಂಗ್ ಕಳವಳ

Published : Jan 20, 2017, 12:07 PM ISTUpdated : Apr 11, 2018, 01:08 PM IST
ವಿವಿಗಳಲ್ಲಿ ಅಭಿವ್ಯಕ್ತಿ ಸ್ವಾತಂತ್ರ್ಯ ಅಪಾಯದಲ್ಲಿ: ಮನಮೋಹನ್ ಸಿಂಗ್ ಕಳವಳ

ಸಾರಾಂಶ

ಪ್ರತಿ ವಿಶ್ವವಿದ್ಯಾಲಯವು ವಿದ್ಯಾರ್ಥಿಗಳಿಗೆ ಜ್ಞಾನಗಳಿಸುವ ಸ್ವಾತಂತ್ರ್ಯವನ್ನು ನೀಡಬೇಕು, ಅದು ಚಾಲ್ತಿಯಲ್ಲಿರುವ ವೈಚಾರಿಕ ಹಾಗೂ  ಸಾಮಾಜಿಕ ಸಂಪ್ರದಾಯಗಳಿಗಿಂತ ಭಿನ್ನವಾಗಿದ್ದರೂ ಸರಿ. ನಾವು ಸ್ವಾತಂತ್ರ್ಯವನ್ನು ಕಾಪಾಡುವ ಅಗತ್ಯವಿದೆ, ಎಂದು ಮನಮೋಹನ್ ಸಿಂಗ್ ಪ್ರೆಸಿಡೆನ್ಸಿ ವಿವಿಯಲ್ಲಿ ಮಾತನಾಡುತ್ತಾ ಹೇಳಿದ್ದಾರೆ.

ಕೋಲ್ಕತ್ತಾ (ಜ.20): ಭಾರತದ ವಿಶ್ವವಿದ್ಯಾಲಯಗಳಲ್ಲಿ ಅಭಿವ್ಯಕ್ತಿ ಸ್ವಾತಂತ್ರ್ಯವನ್ನು ಚಿವುಟಿ ಹಾಕಲಾಗುತ್ತಿದೆಯೆಂದು ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಕಳವಳ ವ್ಯಕ್ತಪಡಿಸಿದ್ದಾರೆ.

ಪ್ರತಿ ವಿಶ್ವವಿದ್ಯಾಲಯವು ವಿದ್ಯಾರ್ಥಿಗಳಿಗೆ ಜ್ಞಾನಗಳಿಸುವ ಸ್ವಾತಂತ್ರ್ಯವನ್ನು ನೀಡಬೇಕು, ಅದು ಚಾಲ್ತಿಯಲ್ಲಿರುವ ವೈಚಾರಿಕ ಹಾಗೂ  ಸಾಮಾಜಿಕ ಸಂಪ್ರದಾಯಗಳಿಗಿಂತ ಭಿನ್ನವಾಗಿದ್ದರೂ ಸರಿ. ನಾವು ಸ್ವಾತಂತ್ರ್ಯವನ್ನು ಕಾಪಾಡುವ ಅಗತ್ಯವಿದೆ, ಎಂದು ಮನಮೋಹನ್ ಸಿಂಗ್ ಪ್ರೆಸಿಡೆನ್ಸಿ ವಿವಿಯಲ್ಲಿ ಮಾತನಾಡುತ್ತಾ ಹೇಳಿದ್ದಾರೆ.

ದುರಾದೃಷ್ಟವಶಾತ್, ಭಾರತದ ವಿವಿಗಳಲ್ಲಿ ಅಭಿವ್ಯಕ್ತಿ ಸ್ವಾತಂತ್ರ್ಯವು ಅಪಾಯದಲ್ಲಿದೆ, ಎಂದು ಮನಮೋಹನ್ ಸಿಂಗ್ ಹೇಳಿದ್ದಾರೆ.

ರಾಷ್ಟ್ರೀಯವಾದದ ಹೆಸರಿನಲ್ಲಿ ದ್ವೇಷವನ್ನು ಬಿತ್ತುವ ಪೃವೃತ್ತಿ ಹೆಚ್ಚಾಗುತ್ತಿದೆಯೆಂದು ಕಳವಳ ವ್ಯಕ್ತಪಡಿಸಿದ ಮನಮೋಹನ್ ಸಿಂಗ್, ಸ್ವತಂತ್ರವಾಗಿ ಆಲೋಚಿಸುವ, ನಿರ್ಭೀತರಾಗಿ ಮಾತನಾಡುವ, ಹಾಗೂ ಭಿನಾಭಿಪ್ರಾಯಗಳನ್ನು ಹೊಸಕಿ ಹಾಕದೇ ಗೌರವಿಸುವುದೇ ನಿಜವಾದ ರಾಷ್ಟ್ರೀಯತೆಯಾಗಿದೆ ಎಂದು ಹೇಳಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಸಿಎಂ ರಾಂಗ್‌ ಫ್ಲೈಟ್‌ ಹತ್ತಿದ್ದಾರೆ: ಸಿದ್ಧರಾಮಯ್ಯ ವಿರುದ್ಧ ಆರ್‌.ಅಶೋಕ್‌ ಗರಂ!
ನನ್ನ-ಸಿಎಂ ಸಿದ್ದರಾಮಯ್ಯ ನಡುವೆ ಒಪ್ಪಂದವಾಗಿದೆ: ಡಿ.ಕೆ.ಶಿವಕುಮಾರ್ ಹೇಳಿಕೆ ಹಾಟ್ ಟಾಪಿಕ್!