
ಕೋಲ್ಕತಾ[ಜೂ.23]: ಲೋಕಸಭೆ ಚುನಾವಣೆ ಸಂದರ್ಭದಲ್ಲಿ ಶುರುವಾದ ಬಿಜೆಪಿ ಮತ್ತು ತೃಣಮೂಲ ಕಾಂಗ್ರೆಸ್ ಕಾರ್ಯಕರ್ತರ ನಡುವಿನ ಘರ್ಷಣೆ ಮತ್ತೆ ಮುಂದುವರಿದಿದೆ.
ಕೋಲ್ಕತಾದಿಂದ 30 ಕಿ.ಮೀ. ದೂರದಲ್ಲಿರುವ ಭಾಟ್ಪಾರಾದಲ್ಲಿ ನಿಷೇಧಾಜ್ಞೆ ಉಲ್ಲಂಘಿಸಿ ಶನಿವಾರ ಎರಡೂ ಪಕ್ಷಗಳ ಕಾರ್ಯಕರ್ತರು ನಾಡಬಾಂಬ್, ಕಲ್ಲುಗಳನ್ನು ತೂರಿ ಹೊಡೆದಾಡಿಕೊಂಡಿದ್ದಾರೆ. ಈ ಸಂದರ್ಭದಲ್ಲಿ ಹಲವು ಮಂದಿ ಗಾಯಗೊಂಡಿದ್ದಾರೆ.
ಗುರುವಾರ ಭಾಟ್ಪಾರಾದಲ್ಲಿ ಸಂಭವಿಸಿದ್ದ ಘರ್ಷಣೆಯಲ್ಲಿ ಇಬ್ಬರು ಬಿಜೆಪಿ ಕಾರ್ಯಕರ್ತರು ಹತರಾಗಿದ್ದರು. ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಸೂಚನೆ ಮೇರೆಗೆ ವಸ್ತು ಸ್ಥಿತಿ ಅಧ್ಯಯನ ನಡೆಸಲು ಸಂಸದ ಅಹ್ಲುವಾಲಿಯಾ ನೇತೃತ್ವದ ತ್ರಿಸದಸ್ಯ ತಂಡ ಭಾಟ್ಪಾರಾಕ್ಕೆ ಆಗಮಿಸಿತ್ತು. ಈ ತಂಡ ಪರಿಶೀಲನೆ ಮುಗಿಸಿ ವಾಪಸ್ ತೆರಳುತ್ತಿದ್ದಂತೆ ಘರ್ಷಣೆ ಉಂಟಾಗಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.