ಡಿಕೆ ಶಿವಕುಮಾರ್‌ಗೆ ನಾಳೆ (ಶುಕ್ರವಾರ) ನಿರ್ಣಾಯಕ ದಿನ

Published : Sep 12, 2019, 06:10 PM ISTUpdated : Sep 12, 2019, 06:16 PM IST
ಡಿಕೆ ಶಿವಕುಮಾರ್‌ಗೆ ನಾಳೆ (ಶುಕ್ರವಾರ) ನಿರ್ಣಾಯಕ ದಿನ

ಸಾರಾಂಶ

ಮನಿ ಲಾಂಡ್ರಿಂಗ್ ಪ್ರಕರಣದಲ್ಲಿ ಇಡಿ ವಶದಲ್ಲಿರುವ ಮಾಜಿ ಸಚಿವ ಡಿ.ಕೆ.ಶಿವಕುಮಾರ್ ಅವರಿಗೆ ನಾಳೆ ಅಂದ್ರೆ ಶುಕ್ರವಾರ ನಿರ್ಣಾಯಕ ದಿನವಾಗಿದೆ. 

ಬೆಂಗಳೂರು, (ಸೆ.12): ನಾಳೆ ಅಂದ್ರೆ ಶುಕ್ರವಾರ ಸೆಪ್ಟೆಂಬರ್ 13ಕ್ಕೆ ಡಿಕೆ ಶಿವಕುಮಾರ್ ಅವರ ಇಡಿ ಕಸ್ಟಡಿ ಅಂತ್ಯವಾಗಲಿದೆ. ಮತ್ತೊಂದೆಡೆ ಮನಿ ಲಾಂಡ್ರಿಂಗ್ ಪ್ರಕರಣದಲ್ಲಿ ಇಡಿ ವಶದಲ್ಲಿರುವ ಡಿಕೆಶಿ ಜಾಮೀನು ಅರ್ಜಿ ವಿಚಾರಣೆ ಸಹ ಇದೆ. ಈ ಹಿನ್ನೆಲೆಯಲ್ಲಿ  ಡಿಕೆ ಶಿವಕುಮಾರ್‌ಗೆ ಶುಕ್ರವಾರ ನಿರ್ಣಾಯಕ ದಿನವಾಗಿದೆ.

ಡಿಕೆ ಶಿವಕುಮಾರ್  ವಿಚಾರಣೆ ಶುಕ್ರವಾರಕ್ಕೆ ಅಂತ್ಯವಾವಾಗಲಿದೆ. ಈ ಹಿನ್ನೆಲೆಯಲ್ಲಿ ಅಂದೇ ಇಡಿ ಅಧಿಕಾರಿಗಳು ಡಿಕೆಶಿಯನ್ನು  ರೋಸ್ ಅವೆನ್ಯೂ ಕೋರ್ಟ್  ಮುಂದೆ ಹಾಜರುಪಡಿಸಲಿದ್ದು, ಕಸ್ಟಡಿ ಅವಧಿ ವಿಸ್ತರಣೆಗಾಗಿ ಇಡಿ ಅಧಿಕಾರಿಗಳ ಪರ ವಕೀಲ ಜಡ್ಜ್ ಮುಂದೆ ಮನವಿ ಮಾಡುವ ಸಾಧ್ಯತೆಗಳಿವೆ.

ಡಿಕೆಶಿ ಸಂಬಂಧಿಸಿದ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಇನ್ನು ಡಿಕೆಶಿ ಪರ ವಕೀಲರು ಸಲ್ಲಿಸಿರುವ ಜಾಮೀನು ಅರ್ಜಿ ವಿಚಾರಣೆಯೂ ಸಹ ನಾಳೆ [ಶುಕ್ರವಾರ] ರೋಸ್ ಅವೆನ್ಯೂ ನ್ಯಾಯಾಲಯದಲ್ಲಿ ನಡೆಯಲಿದೆ.  ಈ ಹಿನ್ನೆಲೆಯಲ್ಲಿ ಶುಕ್ರವಾರ ಡಿಕೆಶಿ ಪಾಲಿಗೆ ಮಹತ್ವದ ದಿನವಾಗಿದ್ದು, ಡಿಕೆಶಿಗೆ ಬೇಲೋ? ಜೈಲೋ? ಎನ್ನುವುದನ್ನು ಕಾದುನೋಡಬೇಕಿದೆ. 

ದೆಹಲಿಯ ಪ್ಲಾಟ್ ನಲ್ಲಿ ಸಿಕ್ಕ 8.6 ಕೋಟಿ ರು. ಹಣ ಪ್ರಕರಣಕ್ಕೆ ಸಂಬಂಧಿಸಿದಂತೆ ಡಿಕೆಶಿ ಶಿಕಮಾರ್ ಅವರಿಗೆ ಸಮನ್ಸ್ ನೀಡಿ ನವದೆಹಲಿಯಲ್ಲಿಯ ಕಚೇರಿಯಲ್ಲಿ ನಾಲ್ಕು ದಿನಗಳ ವರೆಗೆ ಸುದೀರ್ಘ ವಿಚಾರಣೆ ನಡೆಸಿತ್ತು. ಬಳಿಕ 5ನೇ ದಿನಕ್ಕೆ [ಸೆ.03] ವಿಚಾರಣೆಗೆ ಬಂದ ವೇಳೆ  ಡಿಕೆಶಿಯನ್ನು ವಶಕ್ಕೆ ಪಡೆದಿದ್ದ ಇಡಿ ರೋಸ್ ಅವೆನ್ಯೂ ನ್ಯಾಯಾಲಯಕ್ಕೆ ಹಾಜರುಪಡಿಸಿತ್ತು. 

ವಿಚಾರಣೆ ಮಾಡುವ ಅವಶ್ಯಕತೆ ಇರುವುದರಿಂದ ಡಿಕೆಶಿ ಅವರನ್ನು ತಮ್ಮ ವಶಕ್ಕೆ ನೀಡುವಂತೆ ಇಡಿ ಅಧಿಕಾರಿಗಳು ತಮ್ಮ ವಕೀಲರ ಮೂಲಕ ನ್ಯಾಯಾಧೀಶರ ಮುಂದೆ ಮನವಿ ಮಾಡಿದ್ದರು. ಇದನ್ನು ಪರಿಗಣಿಸಿದ್ದ ವಿಶೇಷ ಕೋರ್ಟ್ ಡಿಕೆಶಿಯನ್ನು ಸೆ.13 ವರೆಗೆ ಇಡಿ ಕಸ್ಟಡಿಗೆ ನೀಡಿ ಆದೇಶ ಹೊರಡಿಸಿತ್ತು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ತೀರ್ಥಹಳ್ಳಿಯ ವಿದ್ಯಾರ್ಥಿನಿಗೆ ಹೃದಯಾಘಾತ, ಶೃಂಗೇರಿ ಕಾಲೇಜು ಹಾಸ್ಟೆಲ್‌ನಲ್ಲಿ ಕುಸಿದು ಬಿದ್ದು ಸಾವು
ಪಿಯುಸಿ ಸರ್ಟಿಫಿಕೇಟ್ ಇದ್ದರೆ ಮಾತ್ರ ವಾಹನಕ್ಕೆ ಪೆಟ್ರೋಲ್ -ಡೀಸೆಲ್, ಡಿ.18ರಿಂದ ಹೊಸ ನಿಯಮ