
ಚಂಡೀಗಢ: ಪಂಬಾಬ್ನಲ್ಲಿ ಮಾದಕ ವ್ಯಸನ ಯಾವ ಪ್ರಮಾಣದಲ್ಲಿ ವ್ಯಾಪಿಸಿಕೊಂಡಿದೆ ಅಂದರೆ, ಸರ್ಕಾರದ ನೌಕರರಿಗೂ ಇದೀಗ ಮಾದಕ ದ್ರವ್ಯ ಪರೀಕ್ಷೆಗೆ ಒಳಗಾಗುವುದು ಕಡ್ಡಾಯವಾಗಿದೆ.
ಪೊಲೀಸ್ ಸಿಬ್ಬಂದಿ ಸೇರಿದಂತೆ ಸರ್ಕಾರದ ಎಲ್ಲಾ ನೌಕರರು ನೇಮಕಾತಿ ಮತ್ತು ಪದೋನ್ನತಿಯ ಪ್ರತಿಯೊಂದು ಹಂತದಲ್ಲೂ ಪರೀಕ್ಷೆಗೆ ಒಳಗಾಗುವುದು ಕಡ್ಡಾಯ ಎಂದು ಮುಖ್ಯಮಂತ್ರಿ ಅಮರೀಂದರ್ ಸಿಂಗ್ ಆದೇಶ ಹೊರಡಿಸಿದ್ದಾರೆ.
ಈ ಸಂಬಂಧ ಪರೀಕ್ಷಾ ವಿಧಾನಗಳನ್ನು ಕಂಡುಕೊಳ್ಳುವಂತೆ ಹಾಗೂ ಸುತ್ತೋಲೆ ಹೊರಡಿಸುವಂತೆ ರಾಜ್ಯದ ಮುಖ್ಯ ಕಾರ್ಯದರ್ಶಿಗಳಿಗೆ ಸೂಚಿಸಿದ್ದಾರೆ. ಅಲ್ಲದೇ ಲೋಕಸೇವೆ ಹಾಗೂ ಪೊಲೀಸ್ ಇಲಾಖೆಯ ಎಲ್ಲಾ ಸಿಬ್ಬಂದಿ ವಾರ್ಷಿಕ ವೈದ್ಯಕೀಯ ಪರೀಕ್ಷೆಗೆ ಒಳಗಾಗುವುದು ಕಡ್ಡಾಯವಾಗಿದೆ. ಪಂಜಾಬ್ನಲ್ಲಿ ಮಾದಕದ್ರವ್ಯದ ದುಶ್ಚಟವನ್ನು ಹೋಗಲಾಡಿಸುವ ನಿಟ್ಟಿನಿಂದ ಸರ್ಕಾರ ಈ ಕ್ರಮ ಕೈಗೊಂಡಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.