
ಬೆಳಗಾವಿ(ಜ.05): ಬೆಳಗಾವಿಯ ಅಥಣಿಯ ಸೃಜನಶೀಲ ಲೇಖಕ ಬಾಳಾಸಾಹೇಬ ಲೋಕಾಪುರ ಅವರು ಸೇರಿದಂತೆ ಕೇಂದ್ರ ಸಾಹಿತ್ಯ ಅಕಾಡೆಮಿಗೆ ನಾಲ್ವರನ್ನು ಸದಸ್ಯರನ್ನಾಗಿ ನಾಮನಿರ್ದೇಶನ ಮಾಡಲಾಗಿದೆ.
ಪ್ರಸಕ್ತ ಸಾಲಿನಲ್ಲಿ ಕನ್ನಡ ಭಾಷಾ ವಿಭಾಗದಿಂದ ದಲಿತ ಕವಿ ಸಿದ್ಧಲಿಂಗಯ್ಯ, ಸರಜೂ ಕಾಟ್ಕರ್ ಮತ್ತು ಪ್ರೊ.ಬಾಳಾಸಾಹೇಬ ಲೊಕಾಪುರ ಸೇರಿ ಮೂವರು ಆಯ್ಕೆಯಾಗಿದ್ದರೆ. ಕರ್ನಾಟಕದವರೇ ಆದ ಮಧ್ಯಪ್ರದೇಶದ ಅಮರಕಂಟಕ ಎಂಬಲ್ಲಿನ ಇಂದಿರಾಗಾಂಧಿ ಬುಡಕಟ್ಟು ವಿವಿ ಕುಲಪತಿ, ಧಾರವಾಡದ ಡಾ.ತೇಜಸ್ವಿ ಕಟ್ಟಿಮನಿ ಅವರು ಹಿಂದಿ ಭಾಷೆಯ ವಿಭಾಗದಿಂದ ಆಯ್ಕೆಯಾಗಿದ್ದಾರೆ. ಹೀಗಾಗಿ ಪ್ರಸಕ್ತ ಸಾಲಿನಲ್ಲಿ ಇದೇ ಮೊದಲ ಬಾರಿಗೆ ಕರ್ನಾಟಕದ ನಾಲ್ವರು ಸಾಹಿತಿಗಳು ರಾಜ್ಯವನ್ನು ಪ್ರತಿನಿದಿಸಿದಂತಾಗಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.